ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

 ಮಾಸ್ಕ್ ಹಾಕಿ ಸಾಗರ ಜಾತ್ರೆ ಸುತ್ತಾಡಿದ ದಿವ್ಯಾ ಉರುಡುಗ

Twitter
Facebook
LinkedIn
WhatsApp
ಮಾಸ್ಕ್ ಹಾಕಿ ಸಾಗರ ಜಾತ್ರೆ ಸುತ್ತಾಡಿದ ದಿವ್ಯಾ ಉರುಡುಗ

ದಿವ್ಯಾ ಉರುಡುಗ (Divya Uruduga) ಅವರು ಎರಡು ಬಾರಿ ಬಿಗ್ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧೆ ಮಾಡಿ ಬಂದಿದ್ದಾರೆ. ಅವರು ಸ್ಪರ್ಧೆ ಮಾಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್​ 9’ ಕಳೆದ ವರ್ಷಾಂತ್ಯಕ್ಕೆ ಪೂರ್ಣಗೊಂಡಿದೆ. ‘ಬಿಗ್​ ಬಾಸ್​​’ನಿಂದ ದಿವ್ಯಾ ಉರುಡುಗ ಖ್ಯಾತಿ ಹೆಚ್ಚಿದೆ. ಈಗ ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಯಲ್ಲಿ ಮಾಸ್ಕ್ ಹಾಕಿ ಸುತ್ತಾಡಿದ್ದಾರೆ. ಈ ವಿಡಿಯೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ದಿವ್ಯಾ ಉರುಡುಗ ಅವರು ತೀರ್ಥಹಳ್ಳಿಯವರು. ಅವರಿಗೆ ಊರಿನ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಅನೇಕ ಬಾರಿ ಇದನ್ನು ಅವರು ಹೇಳಿಕೊಂಡಿದ್ದಿದೆ. ಈಗ ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಗೆ ತೆರಳಿದ್ದಾರೆ. ಈ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕಂಡರೆ ಮುತ್ತಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಮಾಸ್ಕ್ ಹಾಕಿ ಅವರು ಓಡಾಡಿದ್ದಾರೆ. ಹೀಗಾಗಿ, ಅವರನ್ನು ಗುರುತಿಸೋದು ಕಷ್ಟವಾಗಿದೆ.

ದಿವ್ಯಾ ಉರುಡುಗ ಹಂಚಿಕೊಂಡಿರುವ ರೀಲ್ಸ್​ಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ನಾನು ಜಾತ್ರೆಯಲ್ಲಿದ್ದರೂ ನಿಮ್ಮನ್ನು ಗುರುತಿಸೋಕೆ ಸಾಧ್ಯವಾಗಲಿಲ್ಲವಲ್ಲ’ ಎಂದಿದ್ದಾರೆ. ಇನ್ನೂ ಕೆಲವರು ‘ಅರವಿಂದ್ ಕೆಪಿ ಬಂದಿಲ್ಲವೇ, ಅವರಿಗೂ ಜಾತ್ರೆ ತೋರಿಸಬಹುದಿತ್ತು’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಮೊದಲ ಬಾರಿಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟರು. ಅಲ್ಲಿ ಬೈಕರ್ ಅರವಿಂದ್ ಕೆಪಿ ಪರಿಚಯ ಅವರಿಗೆ ಆಯಿತು. ಇಬ್ಬರೂ ಪರಸ್ಪರ ಪ್ರೀತಿಸೋಕೆ ಆರಂಭಿಸಿದರು. ಈ ಕಾರಣಕ್ಕೂ ಅವರು ಹೆಚ್ಚು ಗಮನ ಸೆಳೆದರು. ಎಂಟನೇ ಸೀಸನ್​ನಲ್ಲಿ ಅವರು ಎರಡನೇ ರನ್ನರ್ ಅಪ್ ಆದರು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲೂ ದಿವ್ಯಾ ಸ್ಪರ್ಧೆ ಮಾಡಿದ್ದರು. ಅರವಿಂದ್ ಇಲ್ಲ ಎನ್ನುವ ಕಾರಣಕ್ಕೆ ಅವರು ಕೊಂಚ ಡಲ್ ಆದರು. ಆದರೆ, ಕೊನೆಯಲ್ಲಿ ಒಳ್ಳೆಯ ಪರ್ಫಾರ್ಮೆನ್ಸ್ ನೀಡಿದರು. 9ನೇ ಸೀಸನ್​ನಲ್ಲಿ ದಿವ್ಯಾ ಉರುಡುಗ ಅವರು ನಾಲ್ಕನೇ ರನ್ನರ್ ಅಪ್ ಆದರು.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಈ ಚಿತ್ರಕ್ಕೆ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist