ಬೆಂಗಳೂರು: ಮುಂಗಾರು ಪ್ರವೇಶ ( Monsoon Access ) ಕ್ಕೆ ಮುನ್ನವೇ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೈಸೂರು, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಉಡುಪಿಯಲ್ಲಿ ಶುಕ್ರವಾರ ರಜೆ ಘೋಷಿಸಲಾಗಿದೆ. ಸಿಡಿಲು ಬಡಿದು ಇಬ್ಬರು ಸೇರಿದಂತೆ ಒಟ್ಟು ಮೂರು ಮಂದಿ ಮಳೆ ಸಂಬಂಧಿ ಘಟನೆಗಳಲ್ಲಿ ಮೃತಪಟ್ಟಿದ್ದಾರೆ.
ಚಿತ್ರದುರ್ಗ, ಕೊಡಗು, ಶಿವಮೊಗ್ಗ, ದಾವಣಗೆರೆ, ಮಂಡ್ಯ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ರಾತ್ರಿಯಿಂದೀಚೆಗೆ ಭರ್ಜರಿ ಮಳೆಯಾಗಿದ್ದು, ಈ ಜಿಲ್ಲೆಗಳಲ್ಲಿ 60ಕ್ಕೂ ಹೆಚ್ಚು ಮನೆಗಳಿಗೆ ಕೆರೆ ಹಾಗೂ ಚರಂಡಿ ನೀರು ನುಗ್ಗಿದೆ. ಕೊಪ್ಪಳದಲ್ಲಿ ಸಂಗನಾಳ-ಕರಮುಡಿ ಗ್ರಾಮದ ನಡುವಿನ ಸೇತುವೆ ಕೊಚ್ಚಿಹೋಗಿ 4 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಬಳ್ಳಾರಿಯ 37 ಮನೆಗಳು ಸೇರಿ ರಾಜ್ಯದಲ್ಲಿ 80ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಚಿಕ್ಕಮಗಳೂರು, ಮೈಸೂರು, ಹಾಸನ, ರಾಮನಗರ, ಬಳ್ಳಾರಿ, ಧಾರವಾಡ, ಹಾವೇರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಬೆಂಗಳೂರು, ರಾಯಚೂರು ಮತ್ತು ಕಲಬುರಗಿಯಲ್ಲಿ ಮಳೆಯಬ್ಬರ ಕಡಿಮೆ ಇದ್ದರೂ ಇಡೀ ದಿನ ಜಡಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಮಂಡ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಬೇಸಿಗೆ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿದೆ. ಹಲವು ಕೆರೆಕಟ್ಟೆಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ಹಾಲಹಳ್ಳಿ, ಶಂಕರಪುರದ ಹಲವು ಮನೆಗಳಿಗೆ ನೀರು ನುಗ್ಗಿ ಜನ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ. ಮೇಲುಕೋಟೆ ರಸ್ತೆಯಲ್ಲಿರುವ ಎನ್.ಎಫ್. ಇಂಡಸ್ಟ್ರೀಸ್ಗೆ ನೀರು ನುಗ್ಗಿ ಅಪಾರ ಪ್ರಮಾಣದ ಖಾರದ ಪುಡಿ ನೀರುಪಾಲಾಗಿದೆ.
ಮಂಡ್ಯದ ಇಂಡುವಾಳು ಬಳಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆಯೊಂದು ಕೊಚ್ಚಿಹೋಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹಳ್ಳದಲ್ಲಿ ನೀರಿನ ರಭಸ ಹೆಚ್ಚಾದ ಕಾರಣ ಈ ಘಟನೆ ನಡೆದಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭರ್ಜರಿ ಮಳೆಯಾಗಿದೆ. ಗುರುವಾರ ಮಳೆಯ ತೀವ್ರತೆ ಕಡಿಮೆ ಇತ್ತಾದರೂ ಬುಧವಾರ ರಾತ್ರಿಯಿಂದ ಬಿರುಸಿನ ಮಳೆ ಸುರಿದ ಕಾರಣ ಪ್ರವಾಹದ ಆತಂಕ ಸೃಷ್ಟಿಸಿದೆ. ಕೊಡಗಿನಲ್ಲೂ ಉತ್ತಮ ಮಳೆಯಾಗುತ್ತಿದ್ದು, ಚಿಕ್ಲಿಹೊಳೆ ಜಲಾಶಯ ತುಂಬಿ ಹರಿಯಲಾರಂಭಿಸಿದೆ. ಮಳೆಯಿಂದಾಗಿ ಮಡಿಕೇರಿ-ಚೆಟ್ಟಳ್ಳಿ ರಸ್ತೆಯಲ್ಲಿ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿಯಲಾರಂಭಿಸಿದ್ದು, ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿದೆ.
ದಾವಣಗೆರೆಯಲ್ಲಿ 2 ಸಾವಿರ ಎಕರೆಗೂ ಹೆಚ್ಚು ಬೆಳೆ ಹಾನಿಯಾಗಿದೆ. ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದ ಯುವ ರೈತ ನಾಗರಾಜ (28 ವರ್ಷ) ನೀರಿನಲ್ಲಿ ಮುಳುಗಿದ್ದ ಪಂಪ್ಸೆಟ್ ತೆರವು ಮಾಡಲು ಹೋಗಿದ್ದಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ.
ಬೀದರ್, ಯಾದಗಿರಿಯಲ್ಲಿ ಮಳೆಯಬ್ಬರ ಕಡಿಮೆ ಇದ್ದರೂ ಸಿಡಿಲು-ಗಾಳಿಯಬ್ಬರಕ್ಕೆ ಹಲವು ಮನೆಗಳ ಚಾವಣಿಗೆ ಹಾನಿಯಾಗಿದೆ. ಸಿಡಿಲು ಬಡಿದು ಯಾದಗಿರಿಯ ಹುಣಸಗಿ ತಾಲೂಕಿನ ವರಹಟ್ಟಿಗ್ರಾಮದಲ್ಲಿ ಭೀಮಪ್ಪ, ಬೀದರ್ನಲ್ಲಿ ಚಿಮಕೋಡ ಗ್ರಾಮದ ವಿದ್ಯಾವತಿ ಟೊಳ್ಳೆ (52) ಮೃತಪಟ್ಟಿದ್ದಾರೆ.
ಕೊಪ್ಪಳದ ಹಿರೇಸಿಂದೋಗಿ ಗ್ರಾಮದ ಚನ್ನಳ್ಳ ತುಂಬಿ ಕಾಟ್ರಳ್ಳಿ ಶಾಲೆಗೆ ನೀರು ನುಗ್ಗಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಅದೇ ರೀತಿ ಚಿತ್ರದುರ್ಗ ಹೊರವಲಯದ ಮಲ್ಲಾಪುರ ಕೆರೆ ಭರ್ತಿಯಾಗಿ ಕೋಡಿ ಬಿದ್ದ ಕಾರಣ ಸಮೀಪದ ಸರ್ಕಾರಿ ಶಾಲೆಗೆ ನೀರು ನುಗ್ಗಿ ಸಮಸ್ಯೆ ಸೃಷ್ಟಿಸಿದ್ದು, 2 ದಿನ ಶಾಲೆಗೆ ರಜೆ ಘೋಷಿಸಲಾಗಿದೆ.
ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿತ್ತು. ಉಡುಪಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಉರುಳಿದ ಪರಿಣಾಮ ಮಡಿಕೇರಿ-ಕುಶಾಲನಗರ ಹೆದ್ದಾರಿಯ ಸಿಂಕೋನ ಬಳಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಒಂದು ಗಂಟೆಗಳ ಕಾಲ ರಸ್ತೆ ಬಂದ್ ಆಗಿದ್ದರಿಂದ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲು ನಿಂತಿದ್ದವು.
ಪೂರ್ವ ಮುಂಗಾರು ಮಳೆಯಿಂದ ರಾಜ್ಯದಲ್ಲಿ 23 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಈವರೆಗೆ ರಾಜ್ಯದಲ್ಲಿ 204 ಹೆಕ್ಟೇರ್ ಕೃಷಿ ಹಾಗೂ 431 ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಬೆಳೆ ಹಾನಿಗೆ ಶೀಘ್ರ ಪರಿಹಾರ ವಿತರಿಸಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ. ಅವರು ಮಳೆ ಅನಾಹುತದ ಬಗ್ಗೆ ಗುರುವಾರ ಅಧಿಕಾರಿಗಳ ಸಭೆ ನಡೆಸಿದರು.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?