ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ದಿವ್ಯಾ ಶ್ರೀಧರ್

Twitter
Facebook
LinkedIn
WhatsApp
44996461 493101667837391 8618735242527637504 n 9

‘ಆಕಾಶದೀಪ’ (Akashadeepa) ಸೀರಿಯಲ್ ನಾಯಕಿ ದಿವ್ಯಾ ಶ್ರೀಧರ್ (Divya Shridhar) ಅವರು ಪತಿ ಅರ್ನವ್ (Arnav) ಕಿರುಕುಳ ವಿರುದ್ಧ ತಿರುಗಿ ಬಿದ್ದಿದ್ದರು. ಕಳೆದ ವರ್ಷ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಅರ್ನವ್‌ನ ಬಂಧಿಸಿದ್ದರು. ಎರಡು ದಿನಗಳ ಹಿಂದೆ ನಟಿ ದಿವ್ಯಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ಮುದ್ದಾದ ಮಗಳ ಫೋಟೋ ಹಂಚಿಕೊಂಡಿದ್ದಾರೆ.

ಪ್ರೀತಿಸಿ ಮದುವೆಯಾದ ಗಂಡ ನಾನು ಗರ್ಭಿಣಿ ಆಗುತ್ತಿದ್ದಂತೆ ಮತ್ತೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ. ನನಗೆ ಕಿರುಕುಳ ಕೊಡುತ್ತಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕಿರುತೆರೆ ನಟ ಅರ್ನವ್ ಬಂಧನವಾಗಿತ್ತು. ಕಳೆದ ವರ್ಷ ಈ ವಿಚಾರ ದೊಡ್ಡದಾಗಿ ಸದ್ದು ಮಾಡಿತ್ತು. ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆತು ಮಗಳ ಆಗಮನದ ಖುಷಿಯಲ್ಲಿದ್ದಾರೆ. 

ನನ್ನ ಮುದ್ದು ಕಂದ ಲವ್ ಯೂ ಡಾರ್ಲಿಂಗ್ ಎಂದು ಮಗಳ ಆಗಮನದ ಬಗ್ಗೆ ನಟಿ ಹೇಳಿಕೊಂಡಿದ್ದರು. ಈ ಬೆನ್ನಲ್ಲೇ ಮುದ್ದಾದ ಮಗಳ ಮುಖವನ್ನ ರಿವೀಲ್ ಮಾಡಿದ್ದಾರೆ. ಪುಟ್ಟ ದೇವತೆ ಸ್ವಾಗತ ಎಂದು ಅಡಿಬರಹ ನೀಡಿ ಶೇರ್ ಮಾಡಿದ್ದಾರೆ. 

ಆಕಾಶದೀಪ, ಕಣ್ಮಣಿ ಸೀರಿಯಲ್ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೇವಂತಿ ಧಾರಾವಾಹಿ ಮೂಲಕ ತಮಿಳು ಕಿರುತೆರೆಗೆ ದಿವ್ಯಾ ಶ್ರೀಧರ್ ಕಾಲಿಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ