ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್​​ಗೆ ಹೋಲಿಸಿದ್ದ ಪ್ರೊಫೆಸರ್​​ ಅಮಾನತು..

Twitter
Facebook
LinkedIn
WhatsApp
ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್​​ಗೆ ಹೋಲಿಸಿದ್ದ ಪ್ರೊಫೆಸರ್​​ ಅಮಾನತು..

ಉಡುಪಿ: ವಿದ್ಯಾರ್ಥಿಯನ್ನು ತರಗತಿಯೊಳಗೆ ಟೆರರಿಸ್ಟ್ ಅಂತಾ ಪ್ರೊಫೆಸರ್ ನಿಂದಿಸಿದ ಘಟನೆ ಉಡುಪಿಯ ಮಣಿಪಾಲ ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ನಡೆದಿದೆ. ನವೆಂಬರ್ 26ರಂದು ಎಂಐಟಿ ಕಾಲೇಜಿನಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಮುಸ್ಲಿಮರು ಟೆರರಿಸ್ಟ್ ಗಳು ಎಂಬ ಅರ್ಥದಲ್ಲಿ ಪ್ರೊಫೆಸರ್ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಭಾಷಣೆ ಯ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ. ಪ್ರೊಫೆಸರ್ ಮಾತಿಗೆ ತರಗತಿಯಲ್ಲೇ ವಿದ್ಯಾರ್ಥಿ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮುಸ್ಲಿಂ ಸಮುದಾಯವನ್ನು ಟೆರರಿಸ್ಟ್ ಎಂದು ಕರೆಯಬೇಡಿ. ಅನಗತ್ಯ ತಮಾಷೆಯಾಗಿ ಈ ರೀತಿ ಮಾತನಾಡಬೇಡಿ. ಇದು ತಮಾಷೆಯಲ್ಲ ಎಂದು ವಿದ್ಯಾರ್ಥಿ ಆಕ್ಷೇಪಿಸಿದ್ದಾನೆ.

ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್​​ಗೆ ಹೋಲಿಸಿದ್ದ ಪ್ರೊಫೆಸರ್​​ ಅಮಾನತು..

ವಿದ್ಯಾರ್ಥಿ ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ಕ್ಷಮೆ ಕೇಳಿದ್ದಾರೆ. ಆದರೂ ಪಟ್ಟು ಬಿಡದ ವಿದ್ಯಾರ್ಥಿ ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಎಂದು ಆಕ್ಷೇಪಿಸಿದ್ದಾನೆ. ಈ ಸಂಭಾಷಣೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಪನ್ಯಾಸಕನ ವಿರುದ್ಧ ಕ್ರಮ ಮಾಹೆ ವಿವಿ ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

ವಿದ್ಯಾರ್ಥಿಗೆ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದ್ದಾರೆ. ಈ ವಿಡಿಯೋವನ್ನು ತರಗತಿಯ ಒಳಗಿನ ವಿದ್ಯಾರ್ಥಿಗಳೇ ಚಿತ್ರೀಕರಣ ಮಾಡಿರುವ ಸಾಧ್ಯತೆಯಿದೆ. ಈ ಘಟನೆಯ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಮಾಹೆ‌ ವಿಶ್ವವಿದ್ಯಾಲಯ ,ಘಟನೆಯ ಬಗ್ಗೆ ಮಾಹೆ ವಿವಿ ಆಂತರಿಕ ತನಿಖೆ ನಡೆಸುತ್ತದೆ. ಪ್ರೊಫೆಸರ್ ಅವರನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಈ ರೀತಿಯ ಬೆಳವಣಿಗೆಯನ್ನು ನಮ್ಮ ವಿವಿ ಸಹಿಸುವುದಿಲ್ಲ. ಧರ್ಮ, ಪಂಥ, ಮತ, ಲಿಂಗಭೇದಕ್ಕೆ ನಮ್ಮ ವಿವಿಯಲ್ಲಿ ಆಸ್ಪದ ಇಲ್ಲ. ಮಾಹೆ ವಿವಿ ಸಂವಿಧಾನವನ್ನು ಎತ್ತಿ ಹಿಡಿಯುತ್ತದೆ ಎಂದು ಮಾಹೆ ವಿವಿಯ ಎಂ ಐ ಟಿ ವಿಭಾಗ ಸ್ಪಷ್ಟನೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ