ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯಲ್ಲಾಪುರದಲ್ಲಿ ನೂತನ ಏಡಿ ಪತ್ತೆ; ಮಗಳ ಹೆಸರನ್ನಿಟ್ಟ ತಜ್ಞ

Twitter
Facebook
LinkedIn
WhatsApp
ಯಲ್ಲಾಪುರದಲ್ಲಿ ನೂತನ ಏಡಿ ಪತ್ತೆ; ಮಗಳ ಹೆಸರನ್ನಿಟ್ಟ ತಜ್ಞ

ಯಲ್ಲಾಪುರ (ಫೆ.14) :  ಹೊಸ ಜಾತಿಯ ಸಿಹಿ ನೀರಿನ ಏಡಿಯೊಂದು ಮಧ್ಯ ಪಶ್ವಿಮ ಘಟ್ಟದ ಭಾಗವಾದ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಪತ್ತೆಯಾಗಿದೆ. 

ನಿಸರ್ಗ ತಜ್ಞ ಗೋಪಾಲಕೃಷ್ಣ ಹೆಗಡೆ(Gopalkrishna Hegde), ಅರಣ್ಯ ಇಲಾಖೆ(Forest depertment)ಯ ಸಿಬ್ಬಂದಿ ಪರಶುರಾಮ ಭಜಂತ್ರಿ(Parashuram Bhajantri) ಮತ್ತು ಪುಣೆಯ ಪ್ರಾಣಿ ಸರ್ವೇಕ್ಷಣಾಲಯದ ಸಮೀರಕುಮಾರ ಪಾಟಿ ತಂಡ ಈ ವೇಲಾ ಪ್ರಭೇದದ ಹೊಸ ಜಾತಿಯ ಸಿಹಿನೀರಿನ ಏಡಿ(Crab)ಯನ್ನು ಪತ್ತೆ ಹಚ್ಚಿದ್ದು, ಇದಕ್ಕೆ ‘ವೇಲಾ ಬಾಂಧವ್ಯ'(Vela bandhavya) ಎಂದು ಹೆಸರಿಟ್ಟಿದ್ದಾರೆ. 

ಹಳದಿ ಮತ್ತು ಕೇಸರಿ ಮಿಶ್ರಿತ ಮೈಬಣ್ಣದ ಈ ಏಡಿಯು ಮಳೆಗಾಲದಲ್ಲಿ ತೋಟ, ಗದ್ದೆಗಳಲ್ಲಿ ಕಾಣಸಿಗುತ್ತವೆ. ಸಮತಟ್ಟಾದ ಜಾಗದ ಮಣ್ಣಿನಲ್ಲಿ ಸುಮಾರು ಒಂದರಿಂದ ಒಂದೂವರೆ ಅಡಿಯಷ್ಟು ಆಳದಲ್ಲಿ ರಂಧ್ರ‌ ಕೊರೆದು ಇದು ವಾಸ ಮಾಡುತ್ತದೆ. ಸುಮಾರು ನಾಲ್ಕು ಇಂಚು ಅಗಲ, ಮೂರೂವರೆ ಇಂಚು ಉದ್ದವಿರುವ ಈ ಏಡಿಯ ತಲೆಯಿಂದ ಬೆನ್ನಿನ ಮೇಲೆ ಕಪ್ಪು ಬಣ್ಣದ ಪತಂಗದಂಥ ಆಕಾರವಿದೆ. 

ನಿಸರ್ಗ ತಜ್ಞ ಗೋಪಾಲಕೃಷ್ಣ ಹೆಗಡೆಯವರ ಯಲ್ಲಾಪುರ ತಾಲೂಕಿನ ಬಾರೆಯಲ್ಲಿರುವ ತೋಟದಲ್ಲಿ ಈ ಏಡಿ ಪತ್ತೆಯಾಗಿದ್ದು, ವೇಲಾ ಕುಲಕ್ಕೆ ಸೇರಿದ ನಾಲ್ಕನೇ ಪ್ರಭೇದ ಇದಾಗಿದೆ. ವೇಲಾ ಕುಲದ ಕರ್ಲಿ, ಪುಲ್ವಿನಾಟ, ವಿರೂಪ ಎಂಬ ಮೂರೂ ಪ್ರಭೇದಗಳು ಕೇರಳದ ಕರಾವಳಿಯಲ್ಲಿ ಈ ಮೊದಲು ಪತ್ತೆಯಾಗಿದ್ದು, ನಾಲ್ಕನೇ ಪ್ರಭೇದ ಈ ವೇಲಾ ಬಾಂಧವ್ಯ ಆಗಿದೆ. 

ಅಂದಹಾಗೆ, ಬಾರೆಯಲ್ಲಿ ಪತ್ತೆಯಾಗಿರುವ ಈ ಏಡಿಗೆ ಇಟ್ಟಿರುವ ಹೆಸರು ವಿಶೇಷವಾಗಿದ್ದು, ಈ ಏಡಿಯನ್ನು ಗುರುತು ಮಾಡಿರುವ ಗೋಪಾಲಕೃಷ್ಣ ಹೆಗಡೆಯವರ ಮಗಳ ಹೆಸರು ಬಾಂಧವ್ಯ ಹೆಗಡೆ(Bandhavya hegde)ಯವರ ಹೆಸರೇ ಈ ಏಡಿಗಿರಿಸಲಾಗಿದೆ. ಬಾಂಧವ್ಯ ಬಾರೆಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದು, ಅವರದ್ದೇ ತೋಟದಲ್ಲಿ ಈ ಏಡಿ ಪತ್ತೆಯಾಗಿರುವ ಕಾರಣ ಅವರ ಮಗಳ ಹೆಸರನ್ನೇ ಏಡಿಗೆ ನಾಮಕರಣ ಮಾಡಲಾಗಿದೆ.

ಬಹುತೇಕ ಹೊಸ ಜೀವಿಗಳಿಗೆ ಲ್ಯಾಟಿನ್ ಹೆಸರುಗಳನ್ನು ಇಡುವ ಕಾರಣ ಸಾಮಾನ್ಯ ಜನರು ಕೂಡಾ ನೆನಪಿನಲ್ಲಿಡಲು ಈ ಹೆಸರನ್ನು ಆಯ್ಕೆ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist