ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯೋಗಿ ಸರ್ಕಾರಕ್ಕೆ ಸೆಡ್ಡು: ಮುಜಾಫರ್‌ನಗರದಲ್ಲಿ ಬೃಹತ್‌ ರೈತ ಮಹಾಪಂಚಾಯತ್‌!

Twitter
Facebook
LinkedIn
WhatsApp
ಯೋಗಿ ಸರ್ಕಾರಕ್ಕೆ ಸೆಡ್ಡು: ಮುಜಾಫರ್‌ನಗರದಲ್ಲಿ ಬೃಹತ್‌ ರೈತ ಮಹಾಪಂಚಾಯತ್‌!

ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳ ವಿರುದ್ದ ರೈತರ ಹೋರಾಟ 10ನೇ ತಿಂಗಳಿಗೆ ಕಾಲಿಟ್ಟಿದೆ. ಈ ನಡುವೆ ಎಲ್ಲೆಡೆ ರೈತ ಮಹಾಪಂಚಾಯತ್‌ಗಳು ನಡೆಯುತ್ತಿದ್ದು, ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದ ನಿರ್ಬಂಧ, ಅಡ್ಡಿಗಳ ನಡುವೆ ಬೃಹತ್‌ ರೈತ ಮಹಾಪಂಚಾಯತ್‌ಅನ್ನು ರೈತರು ಮುಜಾಫರ್‌ನಗರದಲ್ಲಿ ನಡೆಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ನಡೆಉತ್ತಿರುವ ಕಿಸಾನ್ ಮಹಾಪಂಚಾಯತ್‌ಗೆ ಉತ್ತರ ಪ್ರದೇಶದ ಪೊಲೀಸರು ಮುಜಾಫರ್‌ನಗರದಲ್ಲಿ ಭಾರಿ ಭದ್ರತೆ ಹೆಚ್ಚಿಸಿದ್ದಾರೆ.
“ಮುಜಾಫರ್‌ನಗರದಲ್ಲಿ 8,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎರಡು ರಾಪಿಡ್ ಆಕ್ಷನ್ ಫೋರ್ಸ್ ಮತ್ತು 1,200 ಪೊಲೀಸರು ಸೇರಿದ್ದಾರೆ. ಡ್ರೋನ್ ಕ್ಯಾಮೆರಾಗಳನ್ನು ವೈಮಾನಿಕ ಕಣ್ಗಾವಲುಗಾಗಿ ಬಳಸಲಾಗುತ್ತಿದ್ದು, 200 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ” ಎಂದು ಮುಜಾಫರ್ ನಗರ ಎಸ್‌ಎಸ್‌ಪಿ ಅಭಿಷೇಕ್ ಯಾದವ್ ತಿಳಿಸಿದ್ದಾರೆ.

ಮಹಾಪಂಚಾಯತ್‌ಗೆ ಭಾರಿ ಸಂಖ್ಯೆಯಲ್ಲಿ ರೈತರು ಆಗಮಿಸುತ್ತಿದ್ದು, ಹೊರಗಿಂದ ಬರುವ ರೈತರಿಗಾಗಿ 20 ಸಭಾಂಗಣಗಳನ್ನು ಸಜ್ಜುಗೊಳಿಸಿದೆ. ಯಾವುದೇ ವೈದ್ಯಕೀಯ ತುರ್ತುಸ್ಥಿತಿಯನ್ನು ಎದುರಿಸಲು ಸುಮಾರು 100 ವೈದ್ಯಕೀಯ ಶಿಬಿರಗಳು, 50 ಆಂಬ್ಯುಲೆನ್ಸ್‌ಗಳು ಮತ್ತು ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಾಪಿಸಲಾಗಿದೆ.

ಮುಜಾಫರ್‌ನಗರದ ಸರ್ಕಾರಿ ಇಂಟರ್ ಕಾಲೇಜು ಮೈದಾನದಿಂದ 4 ಕಿಲೋಮೀಟರ್ ವ್ಯಾಪ್ತಿಯಲ್ಲಿ 20 ಕ್ಕೂ ಹೆಚ್ಚು ಎಲ್ಇಡಿ ಪರದೆಗಳು ಮತ್ತು ಮೈಕ್ರೊಫೋನ್ಗಳನ್ನು ಅಳವಡಿಸಲಾಗಿದೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಸಾನ್ ಮಹಾಪಂಚಾಯತ್ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕದಳವು ಕಿಸಾನ್ ಮಹಾಪಂಚಾಯತ್‌ಗೆ ಬೆಂಬಲ ಘೋಷಿಸಿದೆ.

ಹರಿಯಾಣದ ರೈತರೊಬ್ಬರು, “ನಮ್ಮ ಪ್ರಧಾನಿಗೆ ರೈತರ ಬಗ್ಗೆ ಗೌರವವಿಲ್ಲ. ಚಳಿಗಾಲದಲ್ಲಿ ರೈತರನ್ನು ರಸ್ತೆಯಲ್ಲಿ ಕೂರುವಂತೆ ಮಾಡಿದ ಮೋದಿ ಜೀ ಯಾವ ರೀತಿಯ ರಾಜ..?” ಎಂದು ಪ್ರಶ್ನಿಸಿದ್ದಾರೆ.
“ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಮಹಾಪಂಚಾಯತ್‌ನಲ್ಲಿ ಜಮಾಯಿಸಿದ್ದೇವೆ. ಈ ಮೂರು ಕರಾಳ ಕಾನೂನುಗಳನ್ನು ಹಿಂಪಡೆಯುವಂತೆ ಪ್ರಧಾನ ಮಂತ್ರಿಗೆ ವಿನಂತಿಸುತ್ತೇವೆ” ಎಂದು ರೈತ ಮಹಿಳೆಯೊಬ್ಬರು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಉತ್ತರಪ್ರದೇಶಕ್ಕೆ ಈ ಕಿಸಾನ್ ಮಹಾಪಂಚಾಯತ್‌ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಈ ಹಿಂದೆ ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿ ಖಂಡನೆಗೆ ಒಳಗಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು