
ಕೀವ್: ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಸೇನೆಯ ಯೋಧನೊಬ್ಬನಿಗೆ ಉಕ್ರೇನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಉಕ್ರೇನ್ ನಾಗರಿಕನೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಿರುವ ಆರೋಪದಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. 21 ವರ್ಷದ ವಾಡಿಮ್ ಶಿಶಿ ಮರಿನ್ ತಾನು ನಾಗರಿಕನ ತಲೆಗೆ ಗುಂಡಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ.
ಸಾವನ್ನಪ್ಪಿದ ವ್ಯಕ್ತಿಯು ಫೋನ್ನಲ್ಲಿ ಮಾತನಾಡುತ್ತಿದ್ದು, ಆತ ಉಕ್ರೇನ್ ಯೋಧರಿಗೆ ಮಾಹಿತಿ ಕೊಡಬಹುದೆಂಬ ಅನುಮಾನದಿಂದ ಸೇನೆಯ ಮೇಲಧಿಕಾರಿಯು ಆತನನ್ನು ಕೊಲ್ಲುವಂತೆ ಆದೇಶಿಸಿದ್ದಾಗಿ ವಾಡಿಮ್ ಹೇಳಿಕೊಂಡಿದ್ದಾನೆ. ಯುದ್ಧ ಆರಂಭವಾದ ಬಳಿಕ ಯುದ್ಧಾಪರಾಧ ಸಂಬಂಧ ಶಿಕ್ಷೆಯಾದ ಮೊದಲ ಪ್ರಕರಣವಿದು.
ಇದೇ ವೇಳೆ ವಿಶ್ವಸಂಸ್ಥೆಯ ರಷ್ಯಾ ರಾಯಭಾರಿ ಬೋರಿಸ್ ಬೊಂಡರೆವ್(41) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಷ್ಯಾ ಸರಕಾರದ ನಡೆಯಿಂದ ಬೇಸರಗೊಂಡು ಈ ನಿರ್ಧಾರ ತೆಗೆದುಕೊಂಡಿ ರುವುದಾಗಿ ಅವರು ತಿಳಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist