ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ? ದೆಹಲಿಗೆ ಬರುವಂತೆ ಬಿ.ಎಸ್ ಯಡಿಯೂರಪ್ಪಗೆ ಸೂಚನೆ?

Twitter
Facebook
LinkedIn
WhatsApp
ಆಂಧ್ರಪ್ರದೇಶದ ರಾಜ್ಯಪಾಲರಾಗಿ ಬಿಎಸ್ ಯಡಿಯೂರಪ್ಪ?


ಬೆಂಗಳೂರು: ರಾಜ್ಯ ರಾಜಕೀಯ ದಿನಕ್ಕೊಂದು ತಿರುವನ್ನು ಈ ನಡುವೆ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಬಂದು ಹೋದ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು, ಚರ್ಚೆ ಸದ್ಯಕ್ಕೆ ತಣ್ಣಗಾದಂತೆ ಕಂಡುಬಂದರೂ ಮುಂದೆ ಇನ್ನೆರಡು ವರ್ಷಗಳ ಕಾಲ 2023ರ ವಿಧಾನಸಭೆ ಚುನಾವಣೆಯವರೆಗೆ ಪರಿಸ್ಥಿತಿ ಹೀಗೆಯೇ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ.

ಅರುಣ್ ಸಿಂಗ್ ಅವರು ಬಂದು ಹೋದ ನಂತರ ಮುಖ್ಯಮಂತ್ರಿ ಯಡಿಯೂರಪ್ಪನವರು ಸದ್ಯಕ್ಕೆ ನಿರಾಳರಾದಂತೆ ಕಂಡುಬಂದರೂ ಕೂಡ ಇದು ದೀರ್ಘಸಮಯದವರೆಗೆ ಹೀಗೆಯೇ ಇರಬಹುದು ಎಂಬ ವಾತಾವರಣ ಬಿಜೆಪಿಯಲ್ಲಿ ಇಲ್ಲ.

ಕರ್ನಾಟಕಕ್ಕೆ ಆಗಮಿಸಿದ ಅರುಣ್ ಸಿಂಗ್. ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ.

ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಕೆಲವು ನಾಯಕರು ನಾಯಕತ್ವ ಬದಲಾವಣೆಗೆ ನಿರಂತರ ಒತ್ತಡ ಹಾಕದೆ ಇರಲಾರರು. ಅರುಣ್ ಸಿಂಗ್ ಅವರು ಬಂದು ಹೋಗಿ ಹೈಕಮಾಂಡ್ ಅವರಿಗೆ ವರದಿ ನೀಡಿದ ಮೇಲೆ ಯಡಿಯೂರಪ್ಪನವರನ್ನು ಬಂದು ಭೇಟಿ ಮಾಡುವಂತೆ ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಯಡಿಯೂರಪ್ಪನವರ ಸಂಪುಟದ ಹಿರಿಯ ಸಹೋದ್ಯೋಗಿಯೊಬ್ಬರು ಹೇಳುವ ಪ್ರಕಾರ, ನಾಯಕತ್ವ ಬದಲಾವಣೆ ಸದ್ಯಕ್ಕಿಲ್ಲ. ಅಂದರೆ ಕೋವಿಡ್ ಪರಿಸ್ಥಿತಿ ಮುಂದೆ ಏನಾಗುತ್ತದೋ ಎಂದು ಆತಂಕ, ಅನಿಶ್ಚಿತತೆ ಇರುವುದರಿಂದ ನಾಯಕತ್ವದ ಬದಲಾವಣೆ ಪ್ರಶ್ನೆ ಇನ್ನು ಮೂರ್ನಾಲ್ಕು ತಿಂಗಳು ಉದ್ಭವಿಸದು. ಆದರೆ ಮುಂದೆ ಆರು ತಿಂಗಳಲ್ಲಿ ನಾಯಕತ್ವ ಬದಲಾವಣೆಯನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ.

ನಿಜವಾಗಿಯೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಕಡಿಮೆಯಾಗಿದೆಯ?

2023ರ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬೇಕು ಎಂದು ಹೈಕಮಾಂಡ್ ಸ್ಪಷ್ಟವಾಗಿ ತಿಳಿದಿದೆ. ಆದರೆ ನಾಯಕತ್ವ ಬದಲಾವಣೆಗೆ ಈಗ ಸೂಕ್ತ ಸಮಯವಲ್ಲ, ಸರಿಯಾದ ಸಮಯದಲ್ಲಿ ಎಲ್ಲವೂ ನಡೆಯುತ್ತದೆ ಎಂದು ತಿಳಿಸಿದ್ದಾರೆ.

ಹಾಗಾದರೆ ಯಡಿಯೂರಪ್ಪ ಬದಲಿ ನಾಯಕರು ಯಾರು ಎಂಬ ಪ್ರಶ್ನೆಗೆ ಬಿಜೆಪಿಯಲ್ಲಿ ಸದ್ಯಕ್ಕೆ ಕೇಳಿಬರುತ್ತಿರುವ ಹೆಸರುಗಳು ಕೇಂದ್ರದ ಸಚಿವರುಗಳಾದ ಪ್ರಹ್ಲಾದ್ ಜೋಷಿ, ಡಿ ವಿ ಸದಾನಂದ ಗೌಡ ಅಥವಾ ಮತ್ತೊಬ್ಬ ಪ್ರಬಲ ನಾಯಕನಿರಬಹುದು. ಯಡಿಯೂರಪ್ಪನವನ್ನು ಪಕ್ಷದಿಂದ ನಿರ್ಗಮಿಸುವಾಗ ವರಿಷ್ಠರು ಬರಿಕೈಯಲ್ಲಂತೂ ಕಳುಹಿಸುವುದಿಲ್ಲ, ಅವರಿಗೆ ಗೌರವಾನ್ವಿತ ಹುದ್ದೆ ನೀಡಿ ಮರ್ಯಾದೆ, ಗೌರವಗಳಿಂದಲೇ ಕಳುಹಿಸಿಕೊಡಲಿದೆ ಎಂದು ಬಿಜೆಪಿ ಆಂತರಿಕ ಮೂಲಗಳಿಂದ ತಿಳಿದುಬಂದಿದೆ. ಒಟ್ಟಾರೆ ರಾಜ್ಯ ರಾಜಕೀಯ ದಿನಕ್ಕೊಂದು, ಕ್ಷಣಕ್ಕೊಂದು ತಿರುವನ್ನು ಪಡೆಯುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು