ಮಂಗಳವಾರ, ಮೇ 21, 2024
ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‍ಗೆ ಫುಲ್‌ ಡಿಮ್ಯಾಂಡ್‌!

Twitter
Facebook
LinkedIn
WhatsApp
299583033 476292650982747 8117623344757959015 n 1
 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚುನಾವಣೆ (Karnataka Election) ಸಂದರ್ಭದಲ್ಲಿ ತಾವು ನೀಡಿದ್ದ ಐದು ಗ್ಯಾರಂಟಿಗಳ (Congress Guarantee) ಲಾಭವನ್ನು ಪಡೆಯಲು ಜನ ಉತ್ಸುಕರಾಗಿದ್ದಾರೆ. ಇದೀಗ ಬಿಪಿಎಲ್ ಕಾರ್ಡ್ (BPL Card) ಮಾಡಿಸಲು ಸೈಬರ್ ಸೆಂಟರ್‌ಗಳಿಗೆ ಜನ ಮುಗಿಬೀಳುತ್ತಿದ್ದಾರೆ.

ಹೊಸ ಕಾರ್ಡ್ ಮಾಡಿಸಲು ಜನ ಬೆಂಗಳೂರು ಒನ್ (Bangalore one) ಹಾಗೂ ಸೈಬರ್ ಸೆಂಟರ್‌ಗೆ ಧಾವಿಸುತ್ತಿದ್ದಾರೆ. ನಿತ್ಯ 20 ರಿಂದ 30 ಜನ ಒಂದೊಂದು ಸೈಬರ್ ಸೆಂಟರ್‌ಗೆ ಅರ್ಜಿ ಹಾಕಲು ಬರುತ್ತಿದ್ದಾರೆ. ಆದರೆ ಸರ್ಕಾರದಿಂದ ಹೊಸ ರೇಷನ್ ಕಾರ್ಡ್‍ಗೆ ಅರ್ಜಿ ಸಲ್ಲಿಸಲು ಇನ್ನು ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಲು ಬಂದವರು ವಾಪಸ್‌ ಮರಳುತ್ತಿದ್ದಾರೆ.

ಇನ್ನು ಕೆಲವು ಸೈಬರ್ ಸೆಂಟರ್ ಮಾಲೀಕರು ಕೂಡ ಹೊಸ ಅರ್ಜಿಗಳಿಗೆ ಅವಕಾಶ ನೀಡಿದ್ಯಾ ಎಂದು ಇಲಾಖಾ ವೆಬ್ ಸೈಟ್ ಓಪನ್ ಮಾಡಿ ಪರಿಶೀಲಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ   ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರುವ ಕಾರಣ ಸರ್ವರ್ ಸಮಸ್ಯೆ (Server Problem) ಆರಂಭವಾಗಿದೆ.  

ಸಾಧಾರಣವಾಗಿ ಬಿಪಿಎಲ್ ಕಾರ್ಡ್ ಮಾಡಿಸಲು ಇಲ್ಲಿಯವರೆಗೆ ಗ್ರಾಮೀಣ ಭಾಗಗಳಲ್ಲಿ ಜನ ಮುಗಿಬೀಳುತ್ತಿದ್ದರು. ಆದರೆ ಈಗ ಬೆಂಗಳೂರಿನಲ್ಲೂ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ವಿಶೇಷ.

ಜಾರಿ ಯಾವಾಗ?
ಅಧಿಕಾರಕ್ಕೆ ಬಂದ ತಕ್ಷಣ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಆದೇಶ ಹೊರಡಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಘೋಷಣೆ ಮಾಡಿದ್ದರು. ಆದರೆ ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ಮಾತ್ರ ಸಿಕ್ಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ