ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಿಲಯನ್ಸ್ ಸ್ವತಂತ್ರ ನಿರ್ದೇಶಕರಾಗಿ ಕನ್ನಡಿಗ ಕೆ.ವಿ.ಕಾಮತ್ ನೇಮಕ

Twitter
Facebook
LinkedIn
WhatsApp
ರಿಲಯನ್ಸ್ ಸ್ವತಂತ್ರ ನಿರ್ದೇಶಕರಾಗಿ ಕನ್ನಡಿಗ ಕೆ.ವಿ.ಕಾಮತ್ ನೇಮಕ

ಮುಂಬೈ (ನ.5): ಕನ್ನಡಿಗ, ಅನುಭವಿ ಬ್ಯಾಂಕರ್ ಕೆ.ವಿ.ಕಾಮತ್ ಅವರನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ (ಆರ್ ಐಎಲ್) ಸ್ವತಂತ್ರ ನಿರ್ದೇಶಕರನ್ನಾಗಿ 5 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಕಾಮತ್  ಅವರನ್ನು ಪ್ರಸ್ತಾವಿತ ಎನ್ ಬಿಎಫ್ ಸಿ ಜಿಯೋ ಫೈನಾನ್ಷಿಯಲ್ ಸರ್ವೀಸ್ ನ  ನಾನ್ ಎಕ್ಸಿಕ್ಯೂಟಿವ್ ಚೇಮರ್ನ್ ಆಗಿಯೂ ನೇಮಕ ಮಾಡಲಾಗಿದೆ. ಕೆ.ವಿ. ಕಾಮತ್ ಕುಂದಾಪುರ ಮೂಲದವರಾಗಿದ್ದಾರೆ. 74 ವರ್ಷದ ಕಾಮತ್ ಅವರನ್ನು ಐದು ವರ್ಷಗಳ ಅವಧಿಗೆ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಕ ಮಾಡಿರುವ ಬಗ್ಗೆ ಕಂಪನಿ  ಷೇರು ವಿನಿಯಮ ಕೇಂದ್ರಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದೆ. ಐಐಎಂ ಅಹಮದಾಬಾದ್ ಪದವೀಧರರಾಗಿರುವ ಕುಂದಾಪುರ ವಾಮನ್ ಕಾಮತ್ (ಕೆ.ವಿ. ಕಾಮತ್) ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ಸಾಕಷ್ಟು ಜನಪ್ರಿಯತೆ ಕೂಡ ಗಳಿಸಿದ್ದಾರೆ. 1971ರಲ್ಲಿ ಐಸಿಐಸಿಐ ಬ್ಯಾಂಕ್ ಜೊತೆಗೆ ಕಾಮತ್ ಅವರ ವೃತ್ತಿ ಜೀವನ ಪ್ರಾರಂಭಗೊಂಡಿತ್ತು. ಪ್ರಸ್ತುತ ಅವರು 2021ರ ಬಜೆಟ್ ನಲ್ಲಿ ರೂಪಿಸಿದ ಹಣಕಾಸು ಮೂಲಸೌಕರ್ಯ ಹಾಗೂ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ಚೇರ್ಮನ್ ಆಗಿದ್ದಾರೆ. ರಿಲಯನ್ಸ್ ಸಮೂಹ ಸೇರಲಿರುವ ಕಾಮತ್, ಸರ್ಕಾರ ನಿಯೋಜಿತ ಜವಾಬ್ದಾರಿಯಿಂದ ಕೆಳಗಿಳಿಯಲಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 

ಮುಂಬೈಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕೆ.ಇ. ಕಾಮತ್ ಅವರನ್ನು ಕಂಪನಿಗೆ ನೇಮಕ ಮಾಡಿಕೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಕಾಮತ್ ಅವರು 1988ರಲ್ಲಿ ಏಷ್ಯನ್ ಡೆವಲಪ್ ಮೆಂಟ್ ಬ್ಯಾಂಕ್ (ADB)ನಲ್ಲಿ ಕಾರ್ಯನಿರ್ವಹಿಸಿದ್ದರು. ಇವರು ಚೀನಾ, ಬಾಂಗ್ಲಾದೇಶ,ಇಂಡೋನೇಷ್ಯಾ ,ಫಿಲಿಪ್ಪಿನ್ಸ್, ವಿಯೆಟ್ನಾಂ ದೇಶಗಳಲ್ಲಿ ಹಲವಾರು ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

1996ರಲ್ಲಿ ಐಸಿಐಸಿಐ (ICICI) ಬ್ಯಾಂಕ್ ನಲ್ಲಿ ಆಗ್ನೇಯ ಏಷ್ಯಾದಲ್ಲಿ ಹಲವಾರು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು.  2009ರಲ್ಲಿ ಅವರು ಐಸಿಐಸಿಐ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ನಿವೃತ್ತರಾದರು. ಕಾಮತ್ ಅವರ ನೇತೃತ್ವದಲ್ಲಿ ಐಸಿಐಸಿಐ ಬ್ಯಾಂಕ್ ಬ್ಯಾಂಕಿಂಗ್, ವಿಮೆ, ಆಸ್ತಿ ನಿರ್ವಹಣೆ ಮತ್ತು ಜಾಗತಿಕ ಅಸ್ತಿತ್ವದಂತಹ ವೈವಿಧ್ಯಮಯ ಕ್ಷೇತ್ರಗಳಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿತು.  2015ರವರೆಗೆ ಐಸಿಐಸಿಐ ಬ್ಯಾಂಕ್ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದರು. ಕೆ.ವಿ. ಕಾಮತ್ 2011ರ ಮೇ 2ರಂದು ಇನ್ಫೋಸಿಸ್‍ನ (Infosys) ಅಧಿಕಾರರಹಿತ ಅಧ್ಯಕ್ಷರಾಗಿ ನೇಮಕಗೊಂಡಿದ್ದರು ಕೂಡ. 

ರಿಲಯನ್ಸ್ ಸಂಸ್ಥೆ (Reliance Industries) ಹಾಗೂ ಅಂಬಾನಿ (Ambani) ಕುಟುಂಬದೊಂದಿಗಿನ ಕಾಮತ್ ಅವರ ಒಡನಾಟ  ಹೊಸದೇನಲ್ಲ. 70ರ ದಶಕದಲ್ಲೇ ಕಾಮತ್ ಅಂಬಾನಿ ಕುಟುಂಬಕ್ಕೆ ಪರಿಚಿತರಾಗಿದ್ದರು. ಆಗ ಅವರು ಇಂಡಸ್ಟ್ರೀಯಲ್ ಕ್ರೆಡಿಟ್ ಹಾಗೂ ಇನ್ವೆಸ್ಟ್ ಮೆಂಟ್ ಬ್ಯಾಂಕ್ ನಲ್ಲಿ (ಈಗ ಐಸಿಐಸಿಐ ಬ್ಯಾಂಕ್ ಆಗಿ ರೂಪಾಂತರಗೊಂಡಿದೆ) ಕಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುವಾಗ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಗೆ ಸಾಲ (Loan) ಬೇಗ ಸಿಗುವಂತೆ ಮಾಡುವಲ್ಲಿ ನೆರವಾಗಿದ್ದರು. 

ಕೆ.ವಿ.ಕಾಮತ್ ಅವರ ಹಣಕಾಸು ಸೇವೆಗಳಲ್ಲಿನ (Financial Services) ಅಪಾರ ಅನುಭವ ಜಿಯೋ ಫೈನಾನ್ಷಿಯಲ್ (Jio Financial) ಸಂಸ್ಥೆಗೆ ದೊಡ್ಡ ಮಟ್ಟದಲ್ಲಿ ನೆರವಾಗಲಿದೆ. ಜಿಯೋ ಫೈನಾನ್ಷ್ ವಿಮೆ, ಡಿಜಿಟಲ್ ಬ್ರೋಕಿಂಗ್, ಪಾವತಿಗಳು ಹಾಗೂ ಆಸ್ತಿ ನಿರ್ವಹಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯಮ ವಿಸ್ತರಿಸುವ ಗುರಿ ಹೊಂದಿದೆ. 

ಕೆ.ವಿ. ಕಾಮತ್ ಅವರು 1947ರ ಡಿಸೆಂಬರ್ 2ರಂದು ಕುಂದಾಪುರದಲ್ಲಿ ಜನಿಸಿದರು.  ಮಂಗಳೂರಿನ ಸಂತ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪ್ರಾಥಮಿಕ ಹಾಗೂ ಪಿಯುಸಿ ಶಿಕ್ಷಣವನ್ನು ಪಡೆದ ಇವರು, ಸುರತ್ಕಲ್ ನ ಎನ್ ಐಟಿಕೆಯಿಂದ (NITK) ಮೆಕಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ