ಚಿಕ್ಕಮಗಳೂರು: ನಾಡಗೀತೆಯನ್ನು ತಿರುಚಿ ರಾಷ್ಟ್ರಕವಿ ಕುವೆಂಪು ಅವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಬೇಕು, ಜತೆಗೆ ಸಿದ್ದಾಂತ, ಸಂಘಟನೆಗಳನ್ನು ಬೆಂಬಲಿಸುವ ಪರಿಷ್ಕರಿಸುವ ಪಠ್ಯವನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಮಾತನಾಡಿ ರಾಜ್ಯ ಸರ್ಕಾರ ಪ್ರೋ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಸಿದ್ದಪಡಿಸಿದ್ದ ಶಾಲಾ ಪಠ್ಯಗಳನ್ನು ತರಾತುರಿಯಲ್ಲಿ ಮರುಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರ ನೇತೃತ್ವದಲ್ಲಿ ಪಠ್ಯ ಮರು ಪರಿಷ್ಕರಣಾ ಸಮಿತಿ ರಚಿಸಿದೆ. ಇದರ ಶಿಫಾರಸ್ಸಿನ ಅನ್ವಯ ಭಾಷಾ ವಿಷಯ, ಸಮಾಜವಿಜ್ಞಾನ ಪಠ್ಯಗಳನ್ನು ಖಂಡನಾರ್ಹ ಬದಲಾವಣೆ ತಂದಿದೆ, ಸಿದ್ದಾಂತ, ಸಂಘಟನೆಗಳನ್ನು ಬೆಂಬಲಿಸುವ ಪಠ್ಯವನ್ನು ಅಳವಡಿಸಲಾಗಿದೆ. ಕೂಡಲೇ ಪಠ್ಯದ ಜತೆತೆ ಸಮಿತಿಯನ್ನು ರದ್ದಗೊಳಿಸಬೇಕು ಎಂದು ಆಗ್ರಹಿಸಿದರು.
ರಾಷ್ಟ್ರೀಯ ಪಠ್ಯ ಚೌಕಟ್ಟುಗಳು ಮಾರ್ಗಸೂಚಿಯಲ್ಲಿ ಸಂವಿಧಾನ ತತ್ವಗಳಿಗೆ ಅನುಗುಣವಾಗಿ ಸಮಿತಿ ರಚನೆಯಾಗಬೇಕು ಆದರೆ ರಾಜ್ಯ ಸರ್ಕಾರ ನೀತಿಗಳನ್ನು ಗಾಳಿಗೆ ತೂರಿ ಪಕ್ಷ, ಸಿದ್ದಾಂತವೊಂದರ ಅಜೆಂಡಾವನ್ನು ಪಠ್ಯದಲ್ಲಿ ಅಳವಡಿಸಿ ಮಕ್ಕಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ರಚಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞರಿಲ್ಲ, ರೋಹಿತ್ ಚಕ್ರತೀರ್ಥ ಕುವೆಂಪು ರಚಿಸಿರುವ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ್ದಾನೆ. ಅಂತವರನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಅಂತಹ ಕಿಡಿಗೇಡಿಯನ್ನು ಸರ್ಕಾರ ಬಂಧಿಸಬೇಕು. ಜತೆಗೆ ಪಠ್ಯವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ದಶರಥರಾಜ್ ಅರಸ್, ಯುವಘಟಕದ ಅಧ್ಯಕ್ಷ ಕುಮಾರ್ ಆರ್.ಶೆಟ್ಟಿ, ಶಶಿಕುಮಾರ್, ನಾಗಲತಾ, ಸಿದ್ದಪ್ಪ, ಶೈಲಾಶ್ರೀ ಸೇರಿದಂತೆ ಮತ್ತಿತರರು ಇದ್ದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?