ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

Twitter
Facebook
LinkedIn
WhatsApp
ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

ಹಾಸನ: ವಿಧಾನ ಸಭೆ ಸ್ಪೀಕರ್ ಕೂಡಲೇ ಸಭೆ ಕರೆಯದಿದ್ದರೆ ಜುಲೈ ಮೊದಲ ವಾರ ವಿಧಾನಸೌಧ ಆವರಣದ ಗಾಂಧೀಜಿ ಪ್ರತಿಮೆ ಎದುರು ಜೆಡಿಎಸ್ ಶಾಸಕರ ಜತೆಗೂಡಿ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊರೊನಾ ಎರಡನೇ ಅಲೆ ನಿಯಂತ್ರದಲ್ಲಿ ಸಂಪೂರ್ಣ ವಿಫಲವಾಗಿದೆ. ಮತ್ತೆ ಮೂರನೇ ಆಲೆ ಬರಲಿದೆ ಎಂದು ತಜ್ಞರು ಅಭಿಪ್ರಾಯ ತಿಳಿಸಿದ್ದಾರೆ. ಹಾಗಾಗಿ ಈ ಬಾರಿ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಆದ್ದರಿಂದ ಕೂಡಲೇ ವಿಧಾನ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

ಸಿಎಂ ಪರ ಮತನಾಡಿದ ಶಾಸಕನ ಕ್ಷೇತ್ರಕ್ಕೆ 250 ಕೋಟಿ ರೂ. ಅನುದಾನ ನೀಡಲಾಗಿದೆ. ನಾನು ದ್ವೇಶದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ ಮುಖ್ಯ ಮಂತ್ರ ಏನೇನು ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರದ ಅವಧಿಯ ಕಾಮಗಾರಿಗಳು ಯಾಕೆ ನನೆಗುದಿಗೆ ಬಿದ್ದಿವೆ ಎಂಬುದರ ಬಗ್ಗೆ ಸಮಯ ಬಂದಾಗ ದಾಖಲೆ ಸಮೇತ ಹೇಳುವೆ ಎಂದರು.
ರಾಜ್ಯ ಸರ್ಕಾರ ದಿವಾಳಿಯಾಗಿದೆಯೋ ಏನು ಎಂಬುದರ ಬಗ್ಗೆ ಕೂಡಲೇ ಶ್ವೇತ ಪತ್ರ ಹೊರಡಿಸಬೇಕು. ಬಜೆಟ್ ಬಳಿಕ ಕ್ಯಾಬಿನೆಟ್ ಅನುಮೋದನೆ ಪಡೆದುಕೊಂಡು ಸಾರ್ವಜನಿಕರ ತೆರಿಗೆ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಲು ಆಗವುದಿಲ್ಲ. ಈ ಬಗ್ಗೆ ಚರ್ಚಿಸಬೇಕಿದ್ದು, ಕೂಡಲೇ ಸಭೆ ಕರೆಯಬೇಕು ಎಂದು ಹೇಳಿದರು.

5 ಲಕ್ಷ ರೂ. ಆಮಿಷ;
ಅರಸೀಕೆರೆ ನಗರಸಭೆಯ ಜೆಡಿಎಸ್ ನ 7 ಮಂದಿ ಸದಸ್ಯರಿಗೆ 25 ಲಕ್ಷ ರೂ. ಆಮಿಷ ಒಡ್ಡಲಾಗಿದೆ ಎಂದು ಅಭಾಗದ ಜನ ಮಾತನಾಡುತ್ತಿದ್ದಾರೆ. 7 ಜನ ಸದಸ್ಯರಲ್ಲಿ ಯಾರೂ ಈವರೆಗೂ ಜೆಡಿಎಸ್‌ಗೆ ರಾಜೀನಾಮೆ ನೀಡಿಲ್ಲ. ಪಕ್ಷದ ವತಿಯಿಂದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಆಪರೇಷನ್ ಕಮಲ ಮಾಡಲು ಒಂದು ರಾಷ್ಟಿಯ ಪಕ್ಷಕ್ಕೆ ನಾಚಿಕೆ ಆಗಬೇಕು. ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಲು ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿಯ ಕಾರ್ಯದರ್ಶಿಯನ್ನು ಬಿಟ್ಟು ಈ ರೀತಿ ಕೆಲಸ ಮಾಡಿಸಲಾಗುತ್ತಿದೆ. ಮುಂದೆ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ದೇವರು ಇವರಿಗೆ ಶಿಕ್ಷೆ ಕೊಡದೆ ಬಿಡುವುದಿಲ್ಲ. ಇದಕ್ಕೆಲ್ಲ ಹೆದರಿ ನಾವು ಓಡಿ ಹೋಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಶಾಸಕರಾದ ಕೆ.ಎಂ.ಶಿವಲಿ೦ಗೇಗೌಡ, ಕೆ.ಎಸ್.ಲಿಂಗೇಶ್, ಎಚ್.ಕೆ. ಕುಮಾರಸ್ವಾಮಿ ಇದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು