ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೇದಿಕೆಯ ಮೇಲೆ ಚುಂಬಿಸಿದ ವರ – ಮದುವೆ ಮುರಿದು ಠಾಣೆಗೆ ದೂರು ನೀಡಿದ ವಧು

Twitter
Facebook
LinkedIn
WhatsApp
ವೇದಿಕೆಯ ಮೇಲೆ ಚುಂಬಿಸಿದ ವರ – ಮದುವೆ ಮುರಿದು ಠಾಣೆಗೆ ದೂರು ನೀಡಿದ ವಧು

ಬರೀಲಿ: ಅತಿಥಿಗಳ ಸಮ್ಮುಖದಲ್ಲಿ ವೇದಿಕೆಯ ಮೇಲೆ ವರನು (Groom)  ವಧುವನ್ನು (Bride) ಚುಂಬಿಸಿದ (Kiss) ಹಿನ್ನೆಲೆ ವಧು ಮದುವೆಯನ್ನು (Wedding)  ಮುರಿದುಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್‍ನಲ್ಲಿ ನಡೆದಿದೆ.

23 ವರ್ಷದ ಯುವತಿ ಪೋಷಕರು ನೋಡಿದ 26 ವರ್ಷದ ವಿವೇಕ ಅಗ್ನಿಹೋತ್ರಿ ಎಂಬ ಯುವಕನನ್ನು ಮದುವೆಯಾಗುತ್ತಿದ್ದಳು. ಮದುವೆ ಕಾರ್ಯಕ್ರಮವೂ ನಡೆದಿತ್ತು. ಹಾರ ಬದಲಿಸಿದ ಬಳಿಕ ಮದುವೆಯಾಗುತ್ತಿದ್ದ ಯುವಕ ತನ್ನ ಪತ್ನಿಯಾಗಬೇಕಿದ್ದ ಯುವತಿಗೆ ವೇದಿಕೆಯ ಮೇಲೆ ಚುಂಬಿಸಿದ. ಚುಂಬನದ ಬಳಿಕ ಯುವತಿ ಮದುವೆಯನ್ನೇ ಮುರಿದು ಪೊಲೀಸ್ (Police) ಠಾಣೆಗೆ ದೂರು ನೀಡಿದ್ದಾಳೆ. 

ವರ ತನ್ನ ಸ್ನೇಹಿತರ ಜೊತೆಗೆ ಬೆಟ್ಟಿಂಗ್‌ ಕಟ್ಟಿ ಎಲ್ಲರ ಎದುರು ನನಗೆ ಮುತ್ತು ನೀಡಿದ್ದಾನೆ. ವೇದಿಕೆಯ ಮೇಲೆ ಇದ್ದಾಗಲೇ ಅನುಚಿತವಾಗಿ ವರ್ತಿಸಿದ್ದಾನೆ. ನನ್ನ ಸ್ವಾಭಿಮಾನದ ಬಗ್ಗೆ ಯೋಚಿಸಿಲ್ಲ. ಅವನು ಭವಿಷ್ಯದಲ್ಲಿ ಹೇಗೆ ವರ್ತಿಸುತ್ತಾನೆ ಗೊತ್ತಿಲ್ಲ ಆದರೆ ಅವನ ನಡವಳಿಕೆಯಿಂದ ನಾನು ಆಘಾತಗೊಂಡಿದ್ದು, ಅನುಮಾನವೂ ಹೆಚ್ಚಿದೆ ಹೀಗಾಗಿ ನಾನು ಮದುವೆಯಾಗದಿರಲು ನಿರ್ಧರಿಸಿದ್ದೇನೆ ಎಂದು ವಧು ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಬಹ್ಜೋಯ್ ಸ್ಟೇಷನ್ ಹೌಸ್ ಠಾಣೆ ಪೊಲೀಸರು ಕುಟುಂಬಸ್ಥರ ಸಮ್ಮುಖದಲ್ಲಿ ರಾಜಿ ಸಂಧಾನಕ್ಕೆ ಪ್ರಯತ್ನಿಸಿದರು. ಆದರೆ ಯುವತಿ ಯಾವುದೇ ಸಂಧಾನಕ್ಕೆ ಒಪ್ಪಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು ಕೆಲವು ದಿನಗಳ ಸಮಯ ನೀಡಲು ಮನವಿ ಮಾಡಿದ್ದು, ಆಘಾತದಿಂದ ಹೊರ ಬಂದ ಬಳಿಕ ಮನವೊಲಿಸುವ ಭರವಸೆ ನೀಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ