ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆರಣೆಗೆ ಆಗ್ರಹ

Twitter
Facebook
LinkedIn
WhatsApp
ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆರಣೆಗೆ ಆಗ್ರಹ

ರಾಜ್ಯದಲ್ಲಿ ಶಾಲೆಗಳಿಗೆ ಮಧ್ಯಂತರ (ದಸರಾ) ರಜೆಯನ್ನು ಅಕ್ಟೋಬರ್‌ 31 ರವರೆಗೆ ವಿಸ್ತರಣೆ ಮಾಡುವಂತೆ ಒತ್ತಡ ಕೇಳಿಬಂದಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆಗ್ರಹಿಸಿದೆ.

ಕರ್ನಾಟಕ ರಾಜ್ಯದಲ್ಲಿ ಮಧ್ಯಂತರ ದಸರಾ ರಜೆಯನ್ನು ಅಕ್ಟೋಬರ್‌ 3ರಿಂದ ಅಕ್ಟೋಬರ್‌ 17 ರ ವರೆಗೆ ನಿಗದಿಪಡಿಸಲಾಗಿದ್ದು, ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ರಜೆಯನ್ನು ನೀಡಲಾಗಿದೆ. ನಿಜವಾಗಿಯೂ ಮಕ್ಕಳಿಗೆ ಹಾಗೂ ಶೈಕ್ಷಣಿಕ ವ್ಯವಸ್ಥೆಯಲ್ಲಿ ವ್ಯತ್ಯಾಸ ಉಟಾಗುತ್ತಿದೆ.

ಅದ್ರಲ್ಲೂ ಪ್ರತೀ ವರ್ಷಕ್ಕಿಂತ ಈ ಬಾರಿ ಹದಿನೈದು ದಿನ ಮುಂಚಿತವಾಗಿ ಶಾಲೆಗಳನ್ನು ಆರಂಭಿಸಲಾಗಿದೆ. ಅಲ್ಲದೇ ಮಧ್ಯಂತರ ರಜೆ ಅವಧಿಯಲ್ಲಿ ಕಡಿತಗೊಳಿಸಲಾಗಿದೆ ಇದು ರಾಜ್ಯದ ಮಕ್ಕಳಿಗೆ ನಿರಾಸೆ ಉಂಟಾಗಿದೆ. ಹೀಗಾಗಿ ಬೇಸಿಗೆ ರಜೆಯನ್ನು ಈ ಬಾರಿ ಅಕ್ಟೋಬರ್‌ 3 ರಿಂದ ಅಕ್ಟೋಬರ್‌ 31 ರ ವರೆಗೆ ವಿಸ್ತರಣೆ ಮಾಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಮಧ್ಯಂತರ ದಸರಾ ರಜೆ ಹಾಗೂ ಬೇಸಿಗೆ ರಜೆಯನ್ನು ನೀಡಲು ಅದರದೇ ಆದ ವೈಜ್ಞಾನಿಕ ಕಾರಣಗಳಿವೆ. ಮಕ್ಕಳ ಶೈಕ್ಷಣಿಕ ಹಾಗೂ ಭೌತಿಕ ಹಿತದೃಷ್ಟಿಯಿಂದ ರಜಾ ದಿನಗಳನ್ನು ಒಟ್ಟು ನಿರ್ವಹಿಸಬೇಕಾದ ಶಾಲಾ ದಿನಗಳನ್ನು ಕೂಡ ವೈಜ್ಞಾನಿಕವಾಗಿ ನಿರ್ಧರಿಸಲಾಗುತ್ತದೆ.

ಈ ಎಲ್ಲಾ ಅಂಶಗಳ ಜೊತೆಗೆ ಕೋವಿಡ್‌ ಕಾರಣಗಳಿಂದಾಗಿ ಈ ವರ್ಷ ಶಾಲೆಗಳಲ್ಲಿ ಮಕ್ಕಳ ಕಲಿಕಾ ಕಂದಕಗಳನ್ನು ಕಡಿಮೆಗೊಳಿಸುವ ಸಲುವಾಗಿ 15 ದಿನಗಳ ಮುಂಚಿತವಾಗಿ ಮೇ 15 ರಿಂದಲೇ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿತ್ತು. ಹೀಗಾಗಿ ಮಕ್ಕಳಿಗೆ ಶಿಕ್ಷಣ ಹೊರೆಯಾಗದಂತೆ ನೋಡಿಕೊಳ್ಳಲು ದಸರಾ ರಜೆ ವಿಸ್ತರಣೆ ಅನಿವಾರ್ಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕಲಿಕಾ ಚೇತರಿಕೆಯ ಹೆಸರಲ್ಲಿ ಈ ಬಾರಿ ಹದಿನೈದು ದಿನ ಮುಂಚಿತವಾಗಿ ಶಾಲಾರಂಭ ಮಾಡಿರುವುದು ಮಕ್ಕಳ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಿದೆ. ಹಿಂದೆಲ್ಲಾ ಬೇಸಿಗೆ ರಜೆಯನ್ನು ಎರಡು ತಿಂಗಳು, ದಸರಾ ರಜೆಯನ್ನು ಸರಾಸರಿ ಒಂದು ತಿಂಗಳ ಕಾಲ ನೀಡಲಾಗುತ್ತಿತ್ತು. ಆದ್ರೆ ವರ್ಷಗಳು ಕಳೆದಂತೆ ರಜೆಯ ಅವಧಿಯನ್ನು ಕಡಿತ ಮಾಡಲಾಗುತ್ತಿದೆ.

ಈ ಬಾರಿ ಬೇಸಿಗೆ ರಜೆಯಲ್ಲಿ ಹದಿನೈದು ದಿನ ಕಡಿತ ಮಾಡಲಾಗಿದ್ದು, ಇದೀಗ ದಸರಾ ರಜೆಯಲ್ಲಿ ಕಡಿತ ಮಾಡಿರೋದು ಮಕ್ಕಳನ್ನು ಹಾಗೂ ಶಿಕ್ಷಕರನ್ನು ಒತ್ತಡಕ್ಕೆ ಸಿಲುಕಿಸಿದಂತಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆಯೂ ಗಂಭೀರವಾದ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸರಕಾರ, ಶಿಕ್ಷಣ ಇಲಾಖೆ ಈ ಕುರಿತು ಗಂಭೀರವಾದ ಚಿಂತನೆ ನಡೆಸಬೇಕಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ