
ಬೆಳಗಾವಿ: ತಂತ್ರಜ್ಞಾನ ಬೆಳೆದಂತೆ ಕೆಲ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. ಇದಕ್ಕೆ ಉತ್ತಮ ಉದಾಹಾರಣೆ ಅಂದರೆ ಹ್ಯಾಕ್ (Hack). ಟ್ವಿಟರ್, ಫೇಸ್ಬುಕ್ ನಂತಹ ಸಾಮಾಜಿಕ ಜಾಲತಾಣದಲ್ಲಿ (Social Media) ಬಹುತೇಕರು ಕಾಲ ಕಳೆಯುತ್ತಾರೆ. ಜೊತೆಗೆ ದಿನದಿತ್ಯದ ಸುದ್ದಿ, ಸಂದೇಶಗಳನ್ನ ಗ್ರಹಿಸುತ್ತಾರೆ. ಆದರೆ ಕೆಲ ಕಿಡಿಗೇಡಿಗಳು ಖಾತೆಗಳನ್ನ ಹ್ಯಾಕ್ ಮಾಡುವ ಮೂಲಕ ದುರುಪಯೋಗ ಮಾಡಿಕೊಳ್ಳುತ್ತಾರೆ. ಇಂತಹ ಘಟನೆಗಳು ರಾಜ್ಯದಲ್ಲಿ ಬಾರಿ ನಡೆದಿವೆ. ಸದ್ಯ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವಿಟರ್ ಖಾತೆ ಹ್ಯಾಕ್ ಆಗಿದೆ. ಎರಡು ದಿನಗಳ ಹಿಂದೆ ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಶಾಸಕಿ ಮಾಹಿತಿ ನೀಡಿದ್ದು, ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿನ್ನೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಈ ಕುರಿತು ಶಾಸಕರೇ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು. ನನ್ನ ಖಾತೆ ಇದ್ದಕ್ಕಿದ್ದಂತೆ ನಿಷ್ಕ್ರಿಯವಾಗಿದೆ. ಖಾತೆಯನ್ನು ತೆರೆಯದಂತೆ ನಿಯಂತ್ರಣ ತಪ್ಪಿಸಿಲಾಗಿದೆ ಎಂದು ತಿಳಿಸಿದ್ದರು. ನನ್ನ ಖಾತೆಯಿಂದ ಯಾವುದೇ ಅಸಂಬದ್ಧ ಪೋಸ್ಟ್ ಕಂಡುಬಂದರೆ ಅದು ನನ್ನದಾಗಿರಲ್ಲ ಎಂದು ತಿಳಿಯಬೇಕು ಅಂತ ಮನವಿ ಮಾಡಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist