ಬುಧವಾರ, ಮೇ 15, 2024
Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಮುದ್ರದಲ್ಲಿ ವಿಮಾನ ಪತನ; ಪೈಲಟ್ ಸೇರಿದಂತೆ ಮೂವರು ಸಾವು.

Twitter
Facebook
LinkedIn
WhatsApp
ಸಮುದ್ರದಲ್ಲಿ ವಿಮಾನ ಪತನ; ಪೈಲಟ್ ಸೇರಿದಂತೆ ಮೂವರು ಸಾವು.

ಆಸ್ಟ್ರೇಲಿಯದ ಪೂರ್ವ ಕರಾವಳಿಯಲ್ಲಿ ಇಂದು ಬೆಳಗ್ಗೆ ಹಗುರ ವಿಮಾನವು ಸಮುದ್ರದ ನೀರಿನೊಳಗೆ ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಮಾನದಲ್ಲಿ ಓರ್ವ ಪೈಲಟ್ ಹಾಗೂ ಮೂವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರೆಲ್ಲರೂ ಮೃತಪಟ್ಟಿದ್ದಾರೆ.

69 ವರ್ಷದ ಪೈಲಟ್ ಮೂವರು ಪ್ರಯಾಣಿಕರನ್ನು ಜಾಯ್ ರೈಡ್‌ಗೆ ವಿಮಾನದಲ್ಲಿ ಕರೆದುಕೊಂಡು ಹೋಗಿದ್ದರು. ಆ ಮೂವರಲ್ಲಿ ಇಬ್ಬರು ಮಕ್ಕಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬ್ರಿಸ್ಬೇನ್‌ನ ಈಶಾನ್ಯಕ್ಕೆ ಜೌಗು ಪ್ರದೇಶಕ್ಕೆ ಇಳಿದಿದೆ. ರಾಕ್‌ವೆಲ್ ಇಂಟರ್‌ನ್ಯಾಶನಲ್ ವಿಮಾನವು ಮೊರೆಟನ್ ಕೊಲ್ಲಿಯಲ್ಲಿ ತಲೆಕೆಳಗಾಗಿ ಬಿದ್ದು, ನೀರಿನಲ್ಲಿ ತೇಲುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಇದೊಂದು ದುರಂತ ಅಪಘಾತವಾಗಿದೆ. ಕ್ರಿಸ್‌ಮಸ್‌ಗೆ ಕೆಲವೇ ದಿನಗಳು ಉಳಿದಿರುವಾಗ ಈ ರೀತಿಯ ದುರಂತ ನಡೆಯಬಾರದಿತ್ತು. ಒಂದೇ ಕುಟುಂಬದ ಮೂವರು ಹಾಗೂ ಪೈಲಟ್ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ದಡದತ್ತ ಸಾಗಿಸುವ ಕೆಲಸ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಮಾನ ಪತನಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ. ಮುಂದಿನ ಆರರಿಂದ ಎಂಟು ವಾರಗಳಲ್ಲಿ ಅಪಘಾತದ ಸಂಭವನೀಯ ಕಾರಣದ ವರದಿಯನ್ನು ಪೂರ್ಣಗೊಳಿಸಲಾಗುವುದು ಎಂದು ಆಸ್ಟ್ರೇಲಿಯಾದ ಸಾರಿಗೆ ಸುರಕ್ಷತಾ ಮಂಡಳಿಯ ಆಯುಕ್ತ ಆಂಗಸ್ ಮಿಚೆಲ್ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು