ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಮಾನ್ಯ ಜನರಿಗೆ ಬಿಗ್ ಶಾಕ್!.. ನಂದಿನಿ ಹಾಲು, ಮೊಸರು ದರ 2ರುಪಾಯಿ ಹೆಚ್ಚಳ

Twitter
Facebook
LinkedIn
WhatsApp
ಸಾಮಾನ್ಯ ಜನರಿಗೆ ಬಿಗ್ ಶಾಕ್!.. ನಂದಿನಿ ಹಾಲು, ಮೊಸರು ದರ 2ರುಪಾಯಿ ಹೆಚ್ಚಳ

ಬೆಂಗಳೂರು (ನ. 23):  ಕೆಎಂಎಫ್‌ ನಂದಿನಿ ಹಾಲು ಹಾಗೂ ಮೊಸರಿನ ದರವನ್ನು ಪ್ರತಿ ಲೀಟರ್‌ಗೆ ₹2 ಹೆಚ್ಚಿಸುವುದಾಗಿ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಹಾಲು ಹಾಗೂ ಮೊಸರು ದರ ಹೆಚ್ಚಳದ ಬಗ್ಗೆ KMF ಆಡಳಿತ ಮಂಡಳಿ ಸಭೆ ಬಳಿಕ ಹಾಲಿನ ದರವನ್ನು 2 ರೂ ಹೆಚ್ಚಳ ಮಾಡುವುದಾಗಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಪ್ರತಿ ಲೀಟರ್ ಹಾಲಿಗೆ 2‌ ರೂಪಾಯಿ ಹಾಗೂ ಪ್ರತಿ ಕೆಜಿ ಮೊಸರಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ನೇರವಾಗಿ ರೈತರಿಗೆ ಈ ಹಣವನ್ನು‌ ನೀಡಲಾಗುತ್ತಿದ್ದು, ಗ್ರಾಹಕರು ಸಹಕಾರ‌ ಕೊಡುವಂತೆ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ. ನಾಳೆಯಿಂದಲೇ ಈ ದರ ಜಾರಿಯಾಗಲಿದೆ.

ಕೆಎಂಎಫ್‌ ಸಂಸ್ಥೆಯು ನ.14ರಂದು ಹೊರಡಿಸಿ ಹಿಂಪಡೆದಿದ್ದ ಆದೇಶದಲ್ಲಿ ಹಾಲು ಹಾಗೂ ಮೊಸರಿನ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರು. ಹೆಚ್ಚಳ ಮಾಡಿತ್ತು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಾಲಿನ ದರ ಹೆಚ್ಚಳಕ್ಕೆ ವಿವಿಧ ಹಾಲು ಒಕ್ಕೂಟಗಳಿಂದ ಕೆಎಂಎಫ್‌ ಮೇಲೆ ತೀವ್ರ ಒತ್ತಡವಿತ್ತು. ಹೀಗಾಗಿ ಹಲವು ತಿಂಗಳ ಹಿಂದೆಯೇ ಹಾಲಿನ ದರ ಪರಿಷ್ಕರಣೆಗೆ ನಿರ್ಧರಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಕಳುಹಿಸಿತ್ತು. ಸರ್ಕಾರ ಆಸಕ್ತಿ ತೋರದ ಹಿನ್ನೆಲೆಯಲ್ಲಿ ನ.14 ರಂದು ಹಾಲು ಹಾಗೂ ಮೊಸರಿನ ದರವನ್ನು ಲೀಟರ್‌ಗೆ 3 ರು.ಗಳಂತೆ ಹೆಚ್ಚಳ ಮಾಡಿ ಆದೇಶಿಸಿತ್ತು. 

ಮರು ದಿನದಿಂದಲೇ ಜಾರಿಯಾಗಬೇಕಿದ್ದ ಪರಿಷ್ಕೃತ ದರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ನೀಡಿ ನ.20 ರ ಬಳಿಕ ಸಭೆ ನಡೆಸಿ ನಿರ್ಧರಿಸುವುದಾಗಿ ಪ್ರಕಟಿಸಿದ್ದರು. ಅದರಂತೆ ನವೆಂಬರ್ 21ರಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಪ್ರಭು ಚೌಹಾಣ್, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಪಶುಸಂಗೋಪನಾ ಇಲಾಖೆಯ ಹಾಗು ಕೆಎಂಎಫ್ ಅಧಿಕಾರಿಗಳು ಭಾಗವಹಿಸಿದ್ದರು. ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೂ ನ್ಯಾಯ ಸಿಗುವಂತೆ ಸೂತ್ರವೊಂದನ್ನು ಎರಡು ದಿನಗಳೊಳಗೆ ರೂಪಿಸಿಕೊಂಡು ಬರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್‌) ಸೂಚನೆ ನೀಡಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ