ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಸುಬ್ರಹ್ಮಣ್ಯ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎರಡು ತಿಂಗಳ ಬಳಿಕ ಪತಿಯ ಮೊಬೈಲಿಗೆ ಪತ್ನಿಯ ನಗ್ನ ಫೋಟೋ ಬಂದು ಮದುವೆ ಮುರಿದುಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಹೌದು, ಮೇ ತಿಂಗಳಿನಲ್ಲಿ ವಿವಾಹವಾಗಿದ್ದ ಯುವತಿಯ ಪತಿಗೆ, ಮಾಜಿ ಪ್ರಿಯಕರ ನಗ್ನ ಹಾಗೂ ಅಶ್ಲೀಲ ಫೋಟೊಗಳನ್ನು ಕಳುಹಿಸಿದ್ದು, ವಿಚ್ಚೇದನದ ಹಂತಕ್ಕೆ ತಲುಪಿದೆ. ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇಶ್ ಎಂಬಾತ ತನ್ನ ಮಾಜಿ ಪ್ರಿಯತಮೆಯ ಪೋಟೊಗಳನ್ನು ಆಕೆಯ ಪತಿಗೆ ಕಳುಹಿಸಿದ್ದು, ಸಂಸಾರಕ್ಕೆ ಕೊಲ್ಲಿ ಇಟ್ಟಾಂತಾಗಿದೆ. ಸುಮಾರು 5 ವರ್ಷಗಳ ಹಿಂದಿನ ಪೋಟೊವನ್ನು ಬಳಸಿ ವಿಜೇಶ್ ಈ ಕೃತ್ಯವನ್ನು ಎಸಗಿರುವುದಾಗಿ ನೊಂದ ಯುವತಿ ಆರೋಪಿಸಿದ್ದಾರೆ.
ನೊಂದ ಯುವತಿ ಹಾಗೂ ವಿಜೇಶ್ ಈ ಹಿಂದೆ ಪರಸ್ಪರ ಪ್ರೀತಿಸುತ್ತಿದ್ದರು. 2016 ನವೆಂಬರ್ ತಿಂಗಳಲ್ಲಿ ಯುವತಿ ಪುತ್ತೂರಿಗೆ ಕೆಲಸಕ್ಕೆ ತೆರಳಿದ್ದಾಗ ಆಕೆಯನ್ನು ಚಹಾ ಕುಡಿಯಲು ಹೋಟೆಲ್ಗೆ ಹೋಗೋಣ ಎಂದು ವಿಜೇಶ್ ಒತ್ತಾಯ ಮಾಡಿದ್ದಾನೆ. ಬಳಿಕ ವಿಜೇಶ್ ತನ್ನ ಆಲ್ಟೋ ಕಾರಿನಲ್ಲಿ ಯುವತಿಯನ್ನು ಪುತ್ತೂರಿನ ಹೋಟೆಲ್ಗೆ ಕರೆದುಕೊಂಡು ಹೋಗದೆ ಬಲವಂತವಾಗಿ ಮಂಗಳೂರಿನ ಸುರತ್ಕಲ್ ಬಳಿಯ ಖಾಸಗಿ ಹೋಟೆಲ್ಗೆ ಕರೆದೊಯ್ದಿದ್ದಾನೆ. ನಂತರ ಆಕೆಯ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಮಾಡಿ, ಆಕೆಯ ನಗ್ನ ಸ್ಥಿತಿಯಲ್ಲಿನ ವಿಡಿಯೋ ಮತ್ತು ಫೋಟೋವನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮೇ 3, 2021 ರಂದು ಈ ಯುವತಿ ಬೇರೆ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಇದಾಗಿ ಕೆಲ ದಿನಗಳ ಬಳಿಕ ಆಕೆಯ ಮಾಜಿ ಪ್ರಿಯಕರ ವಿಜೇಶನು ಯುವತಿಯ ಪತಿಗೆ ಈ ಹಿಂದೆ ತೆಗೆದಿದ್ದ ಆಕೆಯ ನಗ್ನ ಫೋಟೋಗಳನ್ನು ಕಳುಹಿಸಿದ್ದಾನೆ. ಇದರಿಂದ ನವ ವಿವಾಹಿತರ ಸಂಸಾರದಲ್ಲಿ ಬಿರುಕು ಉಂಟಾಗಿದೆ. ಮಾತ್ರವಲ್ಲ, ಆಕೆಯ ಪತಿಯೂ ವಿಚ್ಛೇದನಕ್ಕೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?