ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಗೋಣಿಚೀಲದಲ್ಲಿ ಮಹಿಳೆ ಮೃತದೇಹ ಪತ್ತೆ; ಮನೆಬಿಟ್ಟು ಹೋದ ಪತಿರಾಯ, ಹೆಚ್ಚಿದ ಅನುಮಾನ..!

Twitter
Facebook
LinkedIn
WhatsApp
ಸುಳ್ಯ: ಗೋಣಿಚೀಲದಲ್ಲಿ ಮಹಿಳೆ ಮೃತದೇಹ ಪತ್ತೆ; ಮನೆಬಿಟ್ಟು ಹೋದ ಪತಿರಾಯ, ಹೆಚ್ಚಿದ ಅನುಮಾನ..!

ಸುಳ್ಯ, ನ 22: ಇಲ್ಲಿನ ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಪತಿಯೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿರುವ ಇಮ್ರಾನ್ ಎಂಬಾತನ ಪತ್ನಿಯ ಮೃತದೇಹ ಗೋಣಿಚೀಲದೊಳಗೆ ಪತ್ತೆಯಾಗಿದೆ. ಕಳೆದ ಆರು ತಿಂಗಳಿನಿಂದ ಈ ಬಾಡಿಗೆ ಮನೆಯಲ್ಲಿ ದಂಪತಿ ವಾಸವಾಗಿದ್ದು, ಎರಡು ದಿನಗಳ ಹಿಂದಷ್ಟೇ ಇಮ್ರಾನ್ ಊರಿಗೆ ತೆರಳುವುದಾಗಿ ಹೊಟೇಲ್‌ನಲ್ಲಿ ಹೇಳಿ ಹೋಗಿದ್ದ. ಇನ್ನು ಕೆಲ ದಿನಗಳ ಹಿಂದೆ ಮನೆಯಲ್ಲಿ ಕಿರುಚಿದ ಶಬ್ದ ಕೇಳಿದ್ದಲ್ಲದೆ, ಇಮ್ರಾನ್ ಊರಿಗೆಂದು ಹೊರಟು ಹೋಗಿದ್ದಾಗ ಪತ್ನಿಯನ್ನು ಕರೆದೊಯ್ದಿರಲಿಲ್ಲವಾದ್ದರಿಂದ ಅಕ್ಕಪಕ್ಕದ ರೂಂನಲ್ಲಿ ವಾಸವಾಗಿದ್ದವರಿಗೆ ಸಂಶಯ ಮೂಡಿತ್ತು. ಹೀಗಾಗಿ ಆತ ಕೆಲಸ ಮಾಡುತ್ತಿದ್ದ ಹೊಟೇಲ್ ಮಾಲಕರಿಗೆ ಅಕ್ಕಪಕ್ಕದವರು ವಿಷಯ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಇಂದು ಸಂಜೆ ಬಂದು ರೂಂ ಬಾಗಿಲು ಒಡೆದು ನೋಡಿದಾಗ ಗೋಣಿಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆಕೆಯನ್ನು ಆಕೆಯ ಪತಿ ಇಮ್ರಾನ್ ಕೊಲೆಗೈದು ಗೋಣಿಚೀಲದಲ್ಲಿ ಮೃತದೇಹ ತುಂಬಿಸಿಟ್ಟು ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಸುಳ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಫಿಂಗರ್ ಪ್ರಿಂಟ್ ತಜ್ಞರು ಮತ್ತು ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ