ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೆಕ್ಸ್ ದಂಧೆಕೋರರಿಂದ 15 ವರ್ಷದ ಬಾಲಕಿಯನ್ನು ರಕ್ಷಿಸಿದ ಆರ್‌ಪಿಎಫ್ ಯೋಧರು

Twitter
Facebook
LinkedIn
WhatsApp
ಸೆಕ್ಸ್ ದಂಧೆಕೋರರಿಂದ 15 ವರ್ಷದ ಬಾಲಕಿಯನ್ನು ರಕ್ಷಿಸಿದ ಆರ್‌ಪಿಎಫ್ ಯೋಧರು

ಬೆಂಗಳೂರು: ನಿರಂತರವಾಗಿ ತಂದೆಯಿಂದಲೇ ದೈಹಿಕ ಶೋಷಣೆಗೆ ಒಳಗಾಗುತ್ತಿದ್ದ ಬಿಹಾರದ ಮೂಲದ ಅಪ್ರಾಪ್ತ ಬಾಲಕಿ ಮಾನಸಿಕಿಕವಾಗಿ ನೊಂದು ಆತನಿಂದ ತಪ್ಪಿಸಿಕೊಂಡು ಓಡಿ ಬಂದು ಬೆಂಗಳೂರಿನ ಸೆಕ್ಸ್ ದಂಧೆಕೋರರ ಕೈಗೆ ಸಿಕ್ಕಿ, ಬಾಲಕಿಯನ್ನು ಕಳ್ಲಸಾಗಾಣಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಪೊಲೀಸರು ರಕ್ಷಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಶುಕ್ರವಾರ (ಜುಲೈ 9) ಬಿಹಾರಕ್ಕೆ ತೆರಳುವ ದಾನಾಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಆಕೆಯನ್ನು ಅಪರಿಚಿತ ಸ್ಥಳಕ್ಕೆ ಸಾಗಿಸುತ್ತಿದ್ದಾಗ ಕೃಷ್ಣರಾಜಪುರಂ ರೈಲ್ವೆ ನಿಲ್ದಾಣದಲ್ಲಿ ಶೋಧ ನಡೆಸಿದ್ದ ವೇಳೆ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ 10.30 ರ ಸುಮಾರಿನಲ್ಲಿ ರೈಲಿನಲ್ಲಿ ಶೋಧ ನಡೆಸುತ್ತಿದ್ದಾಗ 15 ವರ್ಷದ ಬಾಲಕಿಯನ್ನು ಗಮನಿಸಿದ ಅಧಿಕಾರಿಗಳು ಸಂಶಯಗೊಂಡು ಆಕೆಯನ್ನು ಮಾತನಾಡಿಸಿದ್ದಾರೆ. ಈ ವೇಳೆ ಬಾಲಕಿ ತುಂಬಾ ಭಯಭೀತಳಾಗಿದ್ದಳು ಮತ್ತು ಮಾತನಾಡಲು ತಡವರಿಸುತ್ತಿದ್ದಳು. ತದನಂತರ ಆಕೆ ನೀಡಿದ ಮಾಹಿತಿ ಮೇರೆಗೆ ಕೂಡಲೇ ಕಾರ್ಯ ಪ್ರವೃತ್ತರಾದ ಅಧಿಕಾರಿಗಳು ಆಕೆಯನ್ನು ರಕ್ಷಿಸಿದ್ದಾರೆ.

‘ಬಿಹಾರದ ಪೂರ್ವಿ ಚಂಪಾರನ್ (ಮೋತಿಹಾರಿ) ನಿವಾಸಿ ಎಂದು ಹೇಳಿಕೊಂಡ ಬಾಲಕಿ ತನ್ನ ತಂದೆಯಿಂದ ಪದೇ ಪದೇ ನಡೆಯುವ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದಿಂದಾಗಿ ಬೇಸತ್ತು ಮನೆಯಿಂದ ಓಡಿಹೋಗಿದ್ದಳು. ತಂದೆಯಿಂದ ದೈಹಿಕ ಶೋಷಣೆಗೆ ಒಳಗಾಗುವ ವಿಷಯ ಆಕೆಯ ತಾಯಿಗೂ ತಿಳಿದಿತ್ತಾದರೂ ಆಕೆ ಮಧ್ಯಪ್ರವೇಶಿಸುತ್ತಿರಲಿಲ್ಲ. ಅಷ್ಟೇ ಅಲ್ಲದೆ ಅಪ್ರಾಪ್ತೆಯಾದ ಆಕೆಯನ್ನು ಮದುವೆ ಮಾಡಿಸಲು ಆಕೆಯ ಪೋಷಕರು ಸಿದ್ಧತೆ ನಡೆಸಿದ್ದರು. ಇದರಿಂದ ಬೇಸರಗೊಂಡ ಆಕೆ ಮನೆಯಿಂದ ಪರಾರಿಯಾಗಿದ್ದಳು.

ಸೆಕ್ಸ್ ದಂಧೆಕೋರರಿಂದ 15 ವರ್ಷದ ಬಾಲಕಿಯನ್ನು ರಕ್ಷಿಸಿದ ಆರ್‌ಪಿಎಫ್ ಯೋಧರು

ಬೆಂಗಳೂರಿಗೆ ಬಂದಿದ್ದ ಆಕೆಗೆ ಕೆಲ ದುಷ್ಕರ್ಮಿಗಳು ಡ್ರಗ್ಸ್ ನೀಡಿ ಆಕೆಯನ್ನು ಅಪಹರಿಸಿದ್ದರು. ತದನಂತರ ಕಂಟೈನರ್;ನಲ್ಲಿಟ್ಟು ಆಕೆಯನ್ನು ಸುಮಾರು 1 ತಿಂಗಳ ಕಾಲ ಪೀಡಿಸಿದ್ದರು. ಬಳಿಕ ರೈಲಿನಲ್ಲಿ ಬೇರೊಂದು ಸ್ಥಳಕ್ಕೆ ಕಳ್ಳಸಾಗಣೆ ಮಾಡುವಾಗ ಪೋಲೀಸ್ ತಂಡದ ಸಿಬ್ಬಂದಿಗಳು ಆಕೆಯನ್ನು ಗುರುತಿಸಿ ರಕ್ಷಣೆ ಮಾಡಿದ್ದಾರೆ.

ಪ್ರಸ್ತುತ ಬಾಲಕಿಯನ್ನು ಕೆಎಸ್‌ಆರ್ ರೈಲ್ವೆ ನಿಲ್ದಾಣಕ್ಕೆ ಕರೆದೊಯ್ಯಲಾಗಿದ್ದು, ಆಕೆಯ ಸುರಕ್ಷತೆಗಾಗಿ ಡಾನ್ ಬಾಸ್ಕೊ ಹೋಮ್‌ಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳ ತಿಳಿಸಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು