ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೌಂದರ್ಯ ಶವ ನೋಡಿ ಬೆಚ್ಚಿಬಿದ್ದಿದೆ - ನಟಿ ಪ್ರೇಮಾ ಭಾವುಕ

Twitter
Facebook
LinkedIn
WhatsApp
1 4

ಭಾರತೀಯ ಚಿತ್ರರಂಗ ಕಂಡ ಟ್ಯಾಲೆಂಟೆಡ್‌ ನಟಿ  ಸೌಂದರ್ಯ ಅವರು 90ರ ದಶಕದಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ಮುಂಚೂಣಿಯಲ್ಲಿದ್ದ ಕಲಾವಿದೆ. ಅಪಾರ ಅಭಿಮಾನಿಗಳ ನೆಚ್ಚಿನ ನಟಿಯಾಗಿರುವ ಸೌಂದರ್ಯ ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿತ್ತು. ಆಕೆಯ ಸಾವು ಕುಟುಂಬದವರಿಗೆ, ಆಪ್ತರಿಗೆ ಶಾಕ್ ನೀಡಿತ್ತು. ಇದೀಗ ಸ್ನೇಹಿತೆ ಸೌಂದರ್ಯ ಬಗ್ಗೆ ಪ್ರೇಮಾ ಭಾವುಕರಾಗಿದ್ದಾರೆ.

actress prema about soundarya

1992ರಲ್ಲಿ ‘ಗಂಧರ್ವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಸೌಂದರ್ಯ ಅವರು ಬಹುಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. 2004ರಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಹೆಲಿಕಾಪ್ಟರ್ ದುರಂತದಲ್ಲಿ ಸೌಂದರ್ಯ ನಿಧನರಾದರು. ಇದೀಗ ಸೌಂದರ್ಯ ಅವರನ್ನು ಸಂದರ್ಶನವೊಂದರಲ್ಲಿ ನಟಿ ಪ್ರೇಮಾ ಸ್ಮರಿಸಿದ್ದಾರೆ. 

ಸೌಂದರ್ಯ- ಪ್ರೇಮಾ ಇಬ್ಬರೂ ಆತ್ಮೀಯ ಸ್ನೇಹಿತೆಯರಾಗಿದ್ದರು. ಸೌಂದರ್ಯ ಜೊತೆ ಪ್ರೇಮಾ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ- ತೆಲುಗು ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ. ನಾನು ನನ್ನ ಹೆಂಡ್ತೀರು, ಆಪ್ತಮಿತ್ರ ಎರಡು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದರು. ಈ ಸಿನಿಮಾ ಶೂಟಿಂಗ್ ವೇಳೆ ನಮ್ಮ ನಡುವೆ ಒಡನಾಟ ಬೆಳೆಯಿತು. ರಾಮ ನವಮಿ ಬಂತು ಅಂದರೆ, ಎಲ್ಲರಿಗೂ ಪಾನಕ ಕುಡಿಸುತ್ತಿದ್ದರು. ಅಲ್ಲದೆ ಸೌಂದರ್ಯದ ವಿಚಾರದಲ್ಲಂತೂ ತುಂಬಾನೇ ಕಾಳಜಿ ವಹಿಸುತ್ತಿದ್ದರು. ಆಹಾರವನ್ನೂ ಮಿತವಾಗಿ ಬಳಸುತ್ತಿದ್ದರು. ಸೌಂದರ್ಯಾ ನಟನೆ ಕೂಡ ತುಂಬಾನೇ ಸಹಜವಾಗಿತ್ತು. ಕಣ್ಣಿನಿಂದಲೇ ಸಾವಿರ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದರು ಎಂದು ಪ್ರೇಮಾ ಹೇಳಿಕೊಂಡಿದ್ದಾರೆ.

soundarya 78606106

2004ರಲ್ಲಿ ಸೌಂದರ್ಯ ಚುನಾವಣ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಸೌಂದರ್ಯ ಸಹೋದರ ಅಮರ್‌ನಾಥ್ ಅವರೊಂದಿಗೆ ಪ್ರಚಾರಕ್ಕೆ ಮುಂದಾಗಿದ್ದರು. ಬೆಂಗಳೂರಿನಿಂದ ಆಂಧ್ರಪ್ರದೇಶದ ಕರೀಂನಗರಕ್ಕೆ ಪ್ರಚಾರಕ್ಕೆ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಪತನಗೊಂಡಿತ್ತು. ಈ ಅಪಘಾತದಲ್ಲಿ ಸೌಂದರ್ಯಾ ಜೊತೆ ಸಹೋದರ ಅಮರ್‌ನಾಥ್ ಕೂಡ ಸಾವನ್ನಪ್ಪಿದ್ದರು. ಆ ದಿನವನ್ನು ನೆನೆದು ಪ್ರೇಮಾ ಭಾವುಕರಾಗಿದ್ದಾರೆ.

ಆ ದಿನ ನಾನು ಸೌಂದರ್ಯ ಮನೆಗೆ ಹೋಗಿದ್ದೆ. ಅಲ್ಲಿ ಸೌಂದರ್ಯ ಅವರ ಶವವನ್ನು ಬಾಕ್ಸ್‌ನಲ್ಲಿ ಇಡಲಾಗಿತ್ತು. ಅದರಲ್ಲಿ ಆಕೆಯ ಶವವಿತ್ತು. ಆದರೆ, ಮುಖದ ಗುರುತೇ ಸಿಗಲಿಲ್ಲ. ಅದನ್ನು ನೋಡಿ ಬೆಚ್ಚಿಬಿದ್ದಿದ್ದೆ. ಆ ವೇಳೆ ಕಲಾವಿದರ ಜೀವನ ಇಷ್ಟೇನಾ ಅಂತ ಅನಿಸಿತ್ತು ಎಂದು ಪ್ರೇಮಾ ನಟಿ ಸೌಂದರ್ಯ ಅವರನ್ನು ನೆನೆದು ಪ್ರೇಮಾ ಭಾವುಕರಾಗಿದ್ದಾರೆ.

51f3583f 91fb 4d78 ab25 b41f3d71fced

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist