ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸ್ವಾಮಿ ವಿವೇಕಾನಂದರ ಕನಸು ನನಸು ಮಾಡುತ್ತಿರುವ ನರೇಂದ್ರ ಮೋದಿ – ನಳಿನ್‍ ಕುಮಾರ್ ಕಟೀಲ್

Twitter
Facebook
LinkedIn
WhatsApp
ಸ್ವಾಮಿ ವಿವೇಕಾನಂದರ ಕನಸು ನನಸು ಮಾಡುತ್ತಿರುವ ನರೇಂದ್ರ ಮೋದಿ – ನಳಿನ್‍ ಕುಮಾರ್ ಕಟೀಲ್

ಬೆಂಗಳೂರು: ಸ್ವಾಮಿ ವಿವೇಕಾನಂದರ ಜಗದ್ವಂದ್ಯ ಭಾರತದ ಕನಸು ನನಸು ಮಾಡಲು ನರೇಂದ್ರ ಮೋದಿ ಅವರು ಶಿಲಾನ್ಯಾಸ ಮಾಡಿದರು. ಅವರ ಪರಿಶ್ರಮದ ಫಲವಾಗಿ ಜಗತ್ತಿನ ಅತಿ ಎತ್ತರಕ್ಕೆ ಭಾರತ ಏರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ಬಿಟಿಎಂ ಲೇಔಟ್‍ನಲ್ಲಿ ಯುವ ಮೋರ್ಚಾ ಸಂಘಟಿಸಿದ ಅತಿ ದೊಡ್ಡ ನವಭಾರತ ಮೇಳದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಅತ್ಯುತ್ತಮ ಮೇಳ ಸಂಘಟಿಸಿದ ಯುವ ಮೋರ್ಚಾವನ್ನು ಅವರು ಅಭಿನಂದಿಸಿದರು.
ವಿವೇಕಾನಂದರು ಜಗದ್ವಂದ್ಯ ಭಾರತದ ಕನಸನ್ನು ಕಂಡರು. ಅದನ್ನು ಸಾಕಾರಗೊಳಿಸಲು ಯೋಜನೆಗಳನ್ನು ಮಾಡಿದರು. ಸ್ವದೇಶಿ ಚಿಂತನೆಗಳಿಂದ ದೇಶ ಮುನ್ನಡೆಯಬೇಕು. ಗುಲಾಮಗಿರಿಯಿಂದ ಮುಕ್ತವಾಗಬೇಕು ಎಂಬ ಆಶಯ ಅವರದಾಗಿತ್ತು. ಸ್ವಾತಂತ್ರ್ಯಾನಂತರದ 75 ವರ್ಷಗಳಲ್ಲಿ 65 ವರ್ಷ ಕಾಂಗ್ರೆಸ್ ದೇಶದ ಆಡಳಿತ ನಡೆಸಿತು. ಕಾಂಗ್ರೆಸ್ ಬಡತನ, ಹಸಿವು, ರೋಗ ಮತ್ತು ನಿರುದ್ಯೋಗವನ್ನು ದೇಶದ ಜನರಿಗೆ ಕೊಡುಗೆಯಾಗಿ ನೀಡಿತ್ತು ಎಂದು ವಿವರಿಸಿದರು. ವಂಶಾಡಳಿತದ ರಾಜಕಾರಣ ಕಾಂಗ್ರೆಸ್ ಕೊಡುಗೆ ಎಂದು ತಿಳಿಸಿದರು.

ಭವಿಷ್ಯತ್ ಕಾಲಕ್ಕೆ ಬೆಳಕು ನೀಡಿದ ನಾಯಕ ನರೇಂದ್ರ ಮೋದಿ ಎಂದು ತಿಳಿಸಿದ ಅವರು, ದೇಶದಲ್ಲಿ 2014ರವರೆಗೆ ಯುವಕರು ಸ್ವಾಮಿ ವಿವೇಕಾನಂದರನ್ನು ಪೂಜಿಸಿ ಆರಾಧಿಸಿದರು. ಯುವಕರು ಅಮಿತಾಬ್ ಬಚ್ಚನ್, ಶಾರುಖ್ ಖಾನನ್ನು ಪ್ರೀತಿಸಿದ್ದು ಕಂಡಿದ್ದೇವೆ. ಆದರೆ, 2014ರ ಬಳಿಕ ಈ ದೇಶದ ಯುವಕರು ನರೇಂದ್ರ ಮೋದಿಯವರನ್ನು ಆರಾಧಿಸಿದ್ದಾರೆ. ಅವರನ್ನೇ ಪ್ರೀತಿಸಿದ್ದಾರೆ. ನರೇಂದ್ರ ಮೋದಿ ಈ ದೇಶದ ಐಕಾನ್ ಆಗಿ ಹೊರಹೊಮ್ಮಿದ್ದಾರೆ ಎಂದು ತಿಳಿಸಿದರು.
ಯಾವ ದೇಶಗಳು ಭಾರತವನ್ನು ಭಿಕ್ಷುಕರ ರಾಷ್ಟ್ರ, ರೋಗಗ್ರಸ್ತ ದೇಶ, ನಿರುದ್ಯೋಗಿಗಳ ದೇಶ ಎಂದು ಹೀನಾಯವಾಗಿ ಕಂಡು ಕರೆಯುತ್ತಿದ್ದವೋ ಅಂಥ ದೇಶಗಳು ಕೋವಿಡ್ ಬಂದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಡೆ ನೋಡಿ ಲಸಿಕೆ ಕಳುಹಿಸಿ ಕೊಡಲು ವಿನಂತಿಸಿದವು. ಆ ದೇಶಗಳಿಗೆ ಲಸಿಕೆ ಕಳುಹಿಸಿದ ಪ್ರಧಾನಿ ನರೇಂದ್ರ ಮೋದಿ ಎಂದು ಮೆಚ್ಚುಗೆ ಸೂಚಿಸಿದರು.

ನರೇಂದ್ರ ಮೋದಿಯವರು ಕೇವಲ ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿಲ್ಲ. ಜಗದ್ವಂದ್ಯ ಭಾರತಕ್ಕೂ ಶಿಲಾನ್ಯಾಸ ಮಾಡಿದ್ದಾರೆ. ಅತಿ ಹೆಚ್ಚು ಪ್ರೀತಿಯ ನಾಯಕ ನರೇಂದ್ರ ಮೋದಿ ಮತ್ತು ಅತ್ಯಂತ ಪ್ರೀತಿಯ ದೇಶ ಭಾರತ ಎಂದು ಅಮೇರಿಕದ ಅಧ್ಯಕ್ಷರೂ ತಿಳಿಸುವಂತಾಗಿದೆ ಎಂದು ವಿವರಿಸಿದರು.
ಆರ್‍ಆರ್ ನಗರದಲ್ಲಿ ಕಮಲ ಅರಳಿದೆ. ಅಂಥ ಜಾಗದಲ್ಲಿ ಕಮಲ ಅರಳಿದ ಮೇಲೆ ಇನ್ನು ಬಿಟಿಎಂ ಲೇಔಟ್ ಬಾಕಿ ಆದೀತೇ ಎಂದು ಪ್ರಶ್ನಿಸಿದ ಅವರು, ಮುಂದಿನ ದಿನಗಳಲ್ಲಿ ಸಿದ್ದರಾಮಣ್ಣ, ರಾಮಲಿಂಗಾರೆಡ್ಡಿಗೆ ಚುನಾವಣೆಗೆ ನಿಲ್ಲಲು ಜಾಗ ಇಲ್ಲದ ಸ್ಥಿತಿ ಉಂಟಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು