ತಿರುವನಂತಪುರಂ: ವೇದಿಕೆ ಮೇಲೆ ಹಾಡು ಹೇಳುವ ವೇಳೆ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್(87) ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ ನಡೆಯುವ ಆರ್ಕೆಸ್ಟ್ರಾಗಳಲ್ಲಿ ಹಾಡು ಹಾಡುವ ಮೂಲಕ ಎಡವ ಬಶೀರ್ ಹೆಚ್ಚು ಜನಪ್ರಿಯರಾಗಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ ಗೋಲ್ಡನ್ ಜುಬಿಲಿ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ 1978ರಲ್ಲಿ ಬಿಡುಗಡೆಯಾದ ಹಿಂದಿ ಚಲನಚಿತ್ರ ಟೂಟ್ ಟಾಯ್ಸ್ನ ಪ್ರಸಿದ್ಧ ಭಾರತೀಯ ಗಾಯಕ ಕೆಜೆ ಯೇಸುದಾಸ್ ಅವರ ಮಾನ ಹೋ ತುಮ್ ಬೇಹದ್ ಹಸೀನ್… ಹಾಡನ್ನು ಹಾಡುವಾಗ ಎಡವ ಬಶೀರ್ ಕುಸಿದುಬಿದ್ದಿದ್ದಾರೆ.
ಹಾಡು ಹಾಡುತ್ತಾ ವೇದಿಕೆ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸಿದ ಅವರು ಇದ್ದಕ್ಕಿದಂತೆ ಕೆಳಗೆ ಕುಸಿದು ಬಿದ್ದಿದ್ದಾರೆ. ಜೊತೆಗೆ ಅವರ ಕೈಯಲ್ಲಿದ್ದ ಮೈಕ್ ಕೂಡ ಕೆಳಗೆ ಬಿದ್ದಿದೆ. ನಂತರ ಕೂಡಲೇ ವೇದಿಕೆಯತ್ತ ಜನರು ಆಗಮಿಸಿ, ಬಶೀರ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಬಶೀರ್ ಅವರು ಸ್ವಾತಿ ತಿರುನಾಳ್ ಮ್ಯೂಸಿಕ್ ಅಕಾಡೆಮಿಯಿಂದ ಗಾನಬೂಷಣಂ (ಸಂಗೀತದಲ್ಲಿ ಶೈಕ್ಷಣಿಕ ಪದವಿ) ಪೂರ್ಣಗೊಳಿಸಿದರು. 1972 ರಲ್ಲಿ ಅವರು ಕೊಲ್ಲಂ ಸಂಗೀತಾಲಯ ಗಾನಮೇಳ ತಂಡವನ್ನು ರಚಿಸಿದ್ದರು. ಅಲ್ಲಿಂದ ಅವರ ವೇದಿಕೆ ಕಾರ್ಯಕ್ರಮಗಳು ಪ್ರಾರಂಭವಾಗಿ ತಮ್ಮ 78ನೇ ವಯಸ್ಸಿನವರೆಗೂ ಹಾಡುತ್ತಾ ಬಂದಿದ್ದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?