ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೇ ಚಾಲಕನಿಗೆ ಚಾಕು ಇರಿದ ಪುಂಡರು!

Twitter
Facebook
LinkedIn
WhatsApp
ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೇ ಚಾಲಕನಿಗೆ ಚಾಕು ಇರಿದ ಪುಂಡರು!

ತುಮಕೂರು (ನ.28) : ಕಾರಿನ ಚಾಲಕ ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಪುಂಡರು ಕಾರು ಚಾಲಕನಿಗೆ ಚಾಕು ಇರಿದು ಗಂಭೀರ ಗಾಯಗೊಳಿಸಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೈರೇಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ಹೇಮಂತ್ ಕಾರು ಚಲಾಯಿಸಿಕೊಂಡು ಬೈರೇಹಳ್ಳಿ ಬಳಿ ಹೋಗುತ್ತಿದ್ದಾಗ ದಾರಿ ಗೊತ್ತಾಗಿಲ್ಲ. ಹೀಗಾಗಿ ಮುಂದೆ ಬೈಕ್‌ನಲ್ಲಿ ಹೋಗುತ್ತಿದ್ದ ಪುಂಡರಿಗೆ ಹಾರ್ನ್ ಮಾಡಿ ದಾರಿ ಕೇಳಿದ್ದಾನೆ. ಅಷ್ಟಕ್ಕೇ ಕುಪಿತಗೊಂಡಿರುವ ಪುಂಡರು ಕಾರು ಅಡ್ಡಗಟ್ಟಿದ್ದಾರೆ. ಚಾಲಕ ಹೇಮಂತ್ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಪುಂಡರು. 

ಏಕಾಏಕಿ ನಡೆದ ಪುಂಡರು ಚಾಕು ಇರಿದಿದ್ದರಿಂದ ಹೇಮಂತ್  ಗಂಭೀರ ಗಾಯಗೊಂಡು ಆಘಾತಕ್ಕೊಳಗಾಗಿದ್ದಾನೆ. ಪುಂಡರು ಹೇಮಂತ್‌ಗೆ ಚಾಕು ಇರಿದ ಬಳಿಕ ಬೈಕ್ ಹತ್ತಿ ಪರಾರಿಯಾಗಿದ್ದಾರೆ.  ಘಟನೆ ಮಾಹಿತಿ ತಿಳಿದ ಕೊರಟಗೆರೆ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ‌ಪ್ರಕರಣ ದಾಖಲಾಗಿದ್ದು. ಆಯಾಕಟ್ಟಿನ ಜಾಗದಲ್ಲಿ ಅಳವಡಿಸಿರುವ ಸಿಸಿಟಿವಿ ಪರಿಶೀಲಿಸಿ ಪುಂಡರ ಪತ್ತೆಗೆ ಪೊಲೀಸರು ಕಾರ್ಯಾಚರಣೆಗಿಳಿದಿದ್ದಾರೆ.

ಕೆರೆಯಲ್ಲಿ ಮುಳುಗುತ್ತಿದ್ದ ಯುವಕನ ಕಾಪಾಡಲು ಹೋಗಿ ಇಬ್ಬರೂ ನೀರುಪಾಲು!

ತುಮಕೂರು: ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನ ಕಾಪಾಡಲು ಹೋಗಿ ಇಬ್ಬರು ನೀರುಪಾಲು ಆಗಿರುವ ದುರ್ಘಟನೆ ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ತುಂಬಾಡಿ ದೊಡ್ಡ ಕೆರೆಯಲ್ಲಿ ನಡೆದಿದೆ. ಕೃಷ್ಣಪ್ಪ (45), ನಿತೀನ್(11) ಮೃತ ದುರ್ದೈವಿಗಳು. ನಿನ್ನೆ ಸಂಜೆ ಸ್ನೇಹಿತರ ಜೊತೆ ತುಂಬಾಡಿ ಕೆರೆಯಲ್ಲಿ ಈಜಲು ಹೋಗಿದ್ದ ನಿತೀನ್. ಈಜು ಬರದಿದ್ದರೂ ಕೆರೆಗೆ ಇಳಿದಿದ್ದ ನಿತೀನ್.

ಕೆರೆಯಲ್ಲಿ ಮುಳುಗುತ್ತಿರುವುದನ್ನು ಕಂಡ ಕೃಷ್ಣಪ್ಪ, ನಿತೀನ್‌ನನ್ನ ಕಾಪಾಡಲು ಯತ್ನಿಸಿದ್ದಾನೆ. ಆದರೆ ಈ ವೇಳೆ ನಿತೀನನ್ನು ಕಾಪಾಡುವ ಯತ್ನದಲ್ಲಿ ಇಬ್ಬರೂ ನೀರು ಪಾಲಾಗಿದ್ದಾರೆ. ಈ ಘಟನೆ ಸಂಬಂಧ ತಕ್ಷಣ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದ ಸ್ಥಳಿಯರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ  ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡುರಸ್ತೆಯಲ್ಲೇ ಮಹಿಳೆಯ ಬರ್ಬರ ಹತ್ಯೆ!

ವಿಜಯಪುರ: ಮಹಿಳೆಯನ್ನು ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಹುಡ್ಕೊ ಕಾಲೊನಿಯಲ್ಲಿ ಭಾನುವಾರ ಸಂಭವಿಸಿದೆ. ಸಿಂದಗಿ ಪಟ್ಟಣದ ಹುಡ್ಕೊ ಕಾಲೊನಿಯ ಶಾಂತಾಬಾಯಿ ತಳವಾರ (54) ಕೊಲೆಗೀಡಾದ ಮಹಿಳೆ. ಶಾಂತಾಬಾಯಿ ತಳವಾರ ಅವಳಿಗೆ ಹರಿತವಾದ ಆಯುಧದಿಂದ ತಲೆಗೆ ಹೊಡೆದು, ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿಯೇ ಬೈಕ್‌ವೊಂದು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲಿಸಿದರು. ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ