ಕರಾವಳಿಯಲ್ಲಿ ಹಿಜಾಬ್ ವಿವಾದ ಹಾಗೂ ದೇವಸ್ಥಾನದ ಬಳಿ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡದೇ ಇರುವ ವಿವಾದ ಕರಾವಳಿಯಲ್ಲಿ ಹಿಂದುತ್ವವನ್ನು ಮತ್ತೆ ಬಲಪಡಿಸಿದೆ ಎಂಬ ವಿಶ್ಲೇಷಣೆ ವ್ಯಕ್ತವಾಗುತ್ತಿದೆ.
ಇದು ಮುಂದಿನ ಚುನಾವಣೆಯಲ್ಲಿ ತನ್ನ ಪ್ರಭಾವವನ್ನು ಬೀರುತ್ತದೆ ಎಂದು ರಾಜಕೀಯ ವಿಶ್ಲೇಷಕರು ಸ್ಪಷ್ಟವಾಗಿ ಅಭಿಪ್ರಾಯಪಡುತ್ತಾರೆ. ಪ್ರತಿಬಾರಿ ಹಿಂದುತ್ವ ಬಲವಾದ ಅದು ಬಿಜೆಪಿಗೆ ಸಂಪೂರ್ಣ ಲಾಭವನ್ನು ನೀಡಿದೆ ಎಂದು ಅಂಕಿ-ಅಂಶಗಳ ಪ್ರಕಾರ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.
ಈ ಬಾರಿ ಹಿಂದಿಗಿಂತಲೂ ಪ್ರಬಲವಾಗಿ ಹಿಂದುತ್ವದ ಅಂಶಗಳು ಬೇರೆ ರೂಪದಲ್ಲಿ ಕರಾವಳಿ ಮಲೆನಾಡಿನಲ್ಲಿ ಬೇರೂರುವ ಲಕ್ಷಣ ಕಂಡು ಬಂದಿದೆ. ಇದು ಮುಂದಿನ ಚುನಾವಣೆಗಳಲ್ಲಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಬಿಜೆಪಿಗೆ ಸಂಪೂರ್ಣ ಲಾಭ ತಂದುಕೊಡಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.
ಕರಾವಳಿ ಮಲೆನಾಡಿನಲ್ಲಿ ಕಾಂಗ್ರೆಸ್ ಕೇವಲ ಮೂರು ಸ್ಥಾನಗಳಲ್ಲಿ ಮಾತ್ರ ತನ್ನ ಎಂಎಲ್ಎ ಗಳನ್ನು ಹೊಂದಿದೆ. ಬಿಜೆಪಿ 28 ಕ್ಷೇತ್ರಗಳಲ್ಲಿ ನನ್ನ ಎಂಎಲ್ಎ ಗಳನ್ನು ಹೊಂದಿದೆ. ಈ ಬಾರಿ ಹಿಂದಿಗಿಂತಲೂ ಹೆಚ್ಚು ಪ್ರಬಲವಾಗಿರುವ ಕಾರಣ ಈ ಸಂಖ್ಯೆ ಬದಲಾಗುವುದು ಕಷ್ಟ ಸಾಧ್ಯ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ಕಾಂಗ್ರೆಸ್ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿಲ್ಲ, ಬಿಜೆಪಿಯ ಪ್ರಶ್ನೆಗಳಿಗೆ ಉತ್ತರ ನೀಡಲು ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ರಾಜಕೀಯ ತಜ್ಞರು. ಕಾಂಗ್ರೆಸ್ ಕರಾವಳಿ ಮಲೆನಾಡಿನಲ್ಲಿ ಯಾವುದೇ ರೀತಿಯಲ್ಲಿ ಬಿಜೆಪಿಯ ಮುಂದೆ ಉತ್ತರ ನೀಡಲು ಪದೇಪದೇ ವಿಫಲವಾಗುತ್ತಿದೆ ಹಾಗೂ ಪ್ರತಿಭಾವಂತರ ಕೊರತೆ ಕಾಂಗ್ರೆಸ್ಸನ್ನು ಬಹುತೇಕ ಕಾಡುತ್ತಿದೆ ಎಂಬ ಅಭಿಪ್ರಾಯವನ್ನು ರಾಜಕೀಯ ವಿಶ್ಲೇಷಕರು ವ್ಯಕ್ತಪಡಿಸುತ್ತಾರೆ.
ಒಂದು ವೇಳೆ ಕರಾವಳಿ ಮಲೆನಾಡಿನಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದರೆ ಅದು ರಾಜ್ಯದಲ್ಲಿ ಬಿಜೆಪಿ ಮೇಲುಗೈ ಸಾಧಿಸಲು ಬಹಳಷ್ಟು ಅನುಕೂಲಮಾಡಿಕೊಡುತ್ತದೆ ಎಂಬ ಅಭಿಪ್ರಾಯವನ್ನು ರಾಜಕೀಯ ವಿಶ್ಲೇಷಕರು ವ್ಯಕ್ತಪಡಿಸುತ್ತಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist