ಉಡುಪಿ: ಹಿಜಾಬ್ಗಾಗಿ ಹೈಕೋರ್ಟ್ ಮೆಟ್ಟಿಲೇರಿರುವ ಇಲ್ಲಿನ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯ ಪೈಕಿ ಮೂವರು ಎರಡನೇ ವರ್ಷದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾಗಿದ್ದು, ಇವರಿಗೆ ಫೆಬ್ರವರಿ 28 ರಂದು ಸೋಮವಾರ ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಕಾಲೇಜು ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ವಿದ್ಯಾರ್ಥಿನಿಯರಲ್ಲಿ ಓರ್ವರಾಗಿರುವ ಅಲ್ಮಾಸ್ ಎ.ಹೆಚ್ ಅವರು ಈ ಕುರಿತು ಟ್ವೀಟ್ನಲ್ಲಿ ಮಾಡಿದ್ದು, ತನಗೆ ಹಾಗೂ ಕಾಲೇಜಿನ ಇತರ ಇಬ್ಬರು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಿಗೆ ಇಂದು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಪ್ರಾಂಶುಪಾಲರು ಅನುಮತಿಸಲಿಲ್ಲ ಎಂದು ಆರೋಪಿಸಿದ್ದಾರೆ.
ಇಂದು ನಮಗೆ ಪ್ರ್ಯಾಕ್ಟಿಕಲ್ ಪರೀಕ್ಷೆ ಇತ್ತು.ರೆಕಾರ್ಡ್ ಬುಕ್ ಅನ್ನು ಕಂಪ್ಲೀಟ್ ಮಾಡಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದೆವು. ಆದರೆ ಪ್ರಾಂಶುಪಾಲರು ನಮಗೆ ಪೋಲಿಸರಿಗೆ ದೂರು ನೀಡುವ ಬೆದರಿಕೆ ಹಾಕಿದ್ದಾರೆ. 5 ನಿಮಿಷದಲ್ಲಿ ಇಲ್ಲಿಂದ ಹೊರಡಿ, ಇಲ್ಲದಿದ್ದರೆ ನಿಮ್ಮ ಮೇಲೆ ಕೇಸ್ ಹಾಕುತ್ತೇವೆ ಎಂದು ಬೆದರಿಸಿದ್ದಾರೆ.ಹಿಜಾಬ್ ಕುರಿತಾದ ದ್ವೇ಼ಷದಿಂದ ಈ ಪರಿಸ್ಥಿತಿ ಆಗಿದೆ. ಎಲ್ಲವೂ ಸರಿಯಾಗಿದ್ದರೆ ಇಂದು ನಮ್ಮ ಅಂತಿಮ ಲ್ಯಾಬ್ ಪರೀಕ್ಷೆ ಆಗಿರುತ್ತಿತ್ತು. ಹಿಜಾಬ್ ದ್ವೇಷದಿಂದಾಗಿ ಕಾಲೇಜಿನ ಬಗ್ಗೆ ತನಗಿದ್ದ ಆಕಾಂಕ್ಷೆಗಳು ಮತ್ತು ಕನಸುಗಳು ಛಿದ್ರವಾಗುತ್ತಿವೆ ಎಂದು ಅಲ್ಮಾಸ್ ತನ್ನ ಟ್ವೀಟ್ನಲ್ಲಿ ಹೇಳಿದ್ದಾರೆ.
ಈ ಟ್ವೀಟ್ ನ್ನು ಅಂತರಾಷ್ಟ್ರೀಯ ಮಾಧ್ಯಮ, ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮತ್ತಿತರಿಗೆ ಟ್ಯಾಗ್ ಮಾಡಿದ್ದಾರೆ
ಹಿಜಾಬ್ ಹಾಕಿಕೊಂಡು ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೇಂದು ಕೋರಿ ಹೈಕೊರ್ಟ್ ಗೆ ಅರ್ಜಿ ಸಲ್ಲಿಸಿದವರ ಪೈಕಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಲ್ಮಾಝ್, ಹಝ್ರ ಶಿಫಾ ಹಾಗೂ ಬೀಬಿ ಆಯಿಶ ಅವರು ದ್ವಿತೀಯ ಪಿಯು ವಿದ್ಯಾರ್ಥಿನಿಯರಾಗಿದ್ದಾರೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?