ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೆಸರು ಉಲ್ಟಾ ಹಾಕಿದ ರಶ್ಮಿಕಾ ಮಂದಣ್ಣ

Twitter
Facebook
LinkedIn
WhatsApp
ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೆಸರು ಉಲ್ಟಾ ಹಾಕಿದ ರಶ್ಮಿಕಾ ಮಂದಣ್ಣ

ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ ಪೇಜ್ ನೋಡಿದವರು ಅಚ್ಚರಿ ಮತ್ತು ಕುತೂಹಲದಿಂದ ಆ ಪೋಸ್ಟ್ ಅನ್ನು ನೋಡಿದ್ದರು. ರಶ್ಮಿಕಾ ತಮ್ಮ ಹೆಸರನ್ನು ಉಲ್ಟಾ ಬರೆಯುವುದರ ಮೂಲಕ ಎಲ್ಲರಲ್ಲೂ ಪ್ರಶ್ನೆ ಮೂಡಿಸಿದ್ದರು. ಈ ರೀತಿ ಪೋಸ್ಟ್ ಮಾಡಲು ಕಾರಣ ಏನಿರಬಹುದು ಎನ್ನುವ ಚರ್ಚೆ ಕೂಡ ನಡೆಯಿತು. ಒಪ್ಪಿಕೊಂಡ ಸಿನಿಮಾಗಳು ದಬ್ಬಾಕಿಕೊಂಡವು ಅಂತ ಹಾಗೆ ಮಾಡಿದ್ರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಇನ್ನೂ ಕೆಲವರು ಟ್ರೋಲ್‍ ಗೆ ವ್ಯಂಗ್ಯ ಮಾಡಲು ಆ ರೀತಿ ಮಾಡಿದ್ರಾ ಎಂದು ಹೇಳಲಾಗಿತ್ತು.

ಆದರೆ, ರಶ್ಮಿಕಾ ತಮ್ಮ ಹೆಸರನ್ನು ಉಲ್ಟಾ ನೇತು ಹಾಕಿದ್ದಕ್ಕೆ ಕಾರಣ ಬೇರೆ ಇದೆ. ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೇಳುವ ಅಭಿಯಾನವನ್ನು ಆರಂಭಿಸಿದ್ದು. ಅಕ್ಷರ ಬಾರದ ಹೆಣ್ಣುಮಕ್ಕಳಿಗೆ ಅಕ್ಷರಗಳು ಉಲ್ಟಾ ಕಾಣುತ್ತವೆ ಎಂದು ಹೇಳುವುದಕ್ಕಾಗಿ ಅವರು ತಮ್ಮ ಹೆಸರನ್ನು ಉಲ್ಟಾ ಬರೆದಿದ್ದರು. ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಶ್ಮಿಕಾ ಬಗ್ಗೆ ಟ್ರೋಲ್ ಮಾಡುತ್ತಿದ್ದವರೂ ಈಗ ಮೆಚ್ಚಿಕೊಂಡಿದ್ದಾರೆ.

ಹೌದು, ಓದು ಬಾರದ ಹೆಣ್ಣು ಮಕ್ಕಳ ಪರ ರಶ್ಮಿಕಾ ಅಭಿಯಾನ ಶುರು ಮಾಡಿದ್ದಾರೆ. ಪ್ರತಿ ಹೆಣ್ಣು ಮಗುವಿಗೂ ಶಿಕ್ಷಣ ಕೊಡಿ ಎಂದು ಸಾರುತ್ತಾರೆ. ಈ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ. ರಶ್ಮಿಕಾ ಅವರ ಈ ಅಭಿಯಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಂತಹ ಕೆಲಸಗಳಿಗಾಗಿ ನಾವು ನಿಮ್ಮನ್ನು ಮೆಚ್ಚಿಕೊಳ್ಳುತ್ತೇವೆ ಎಂದು ವಿರೋಧಿಗಳು ಕೂಡ ಕಾಮೆಂಟ್ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಸಲ್ಲದ ಕಾರಣಕ್ಕಾಗಿ ಟ್ರೋಲ್ ಆಗುತ್ತಿದ್ದರು. ಕಳೆದೊಂದು ತಿಂಗಳಿನಿಂದ ಸಿನಿಮಾ ರಂಗದಿಂದ ಬ್ಯಾನ್ ಮಾಡಿ ಅನ್ನುವ ಒತ್ತಾಯವೂ ಕೇಳಿ ಬಂತು. ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಿದ್ದರು ರಶ್ಮಿಕಾ. ಇದೀಗ ಹೆಣ್ಣು ಮಕ್ಕಳ ಶಿಕ್ಷಣ ಅಭಿಯಾನದ ಮೂಲಕ ಎಲ್ಲರ ಮೆಚ್ಚಿಗೆಗೂ ಪಾತ್ರರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ