ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೋಟೆಲ್ ನಲ್ಲಿ ಚಹಾ ಕುಡಿಯುತ್ತಿದ್ದ ರಾಜಕೀಯ ಮುಖಂಡನ ಮೇಲೆ ಮಚ್ಚು ಲಾಂಗ್ ಗಳಿಂದ ಮಾರಣಾಂತಿಕ ಹಲ್ಲೆ!

Twitter
Facebook
LinkedIn
WhatsApp
ಹೋಟೆಲ್ ನಲ್ಲಿ ಚಹಾ ಕುಡಿಯುತ್ತಿದ್ದ ರಾಜಕೀಯ ಮುಖಂಡನ ಮೇಲೆ ಮಚ್ಚು ಲಾಂಗ್ ಗಳಿಂದ ಮಾರಣಾಂತಿಕ ಹಲ್ಲೆ!

ಬೆಂಗಳೂರು :  ಹೊಟೇಲ್​ನಲ್ಲಿ ಚಹಾ ಕುಡಿಯುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ತಮಿಳುನಾಡಿನಿಂದ ಕಾರಿನಲ್ಲಿ ಬಂದ ಐವರ ಗುಂಪೊಂದು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಗರದ ಬಾಣಸವಾಡಿಯ ಕಮ್ಮನಹಳ್ಳಿ ನಡೆದಿದೆ. ಗಂಭೀರವಾಗಿ ಹಲ್ಲೆಗೊಳಗಾದ ವ್ಯಕ್ತಿ ಮದುರೈ ಕಾರ್ಪೊರೇಷನ್‌ನ ಮಾಜಿ ಡಿಎಂಕೆ (DMK) ಮಂಡಲ ಅಧ್ಯಕ್ಷ ವಿ.ಕೆ.ಗುರುಸ್ವಾಮಿ ಎಂದು ತಿಳಿದುಬಂದಿದೆ.

ವಿ.ಕೆ.ಗುರುಸ್ವಾಮಿ ಅವರು ಕಮ್ಮನಹಳ್ಳಿಯ ಸುಖಸಾಗರ್ ಹೋಟೆಲ್‌ನಲ್ಲಿ ಟೀ ಕುಡಿಯುತ್ತಿದ್ದರು. ಈ ವೇಳೆ ತಮಿಳುನಾಡಿನಿಂದ ಕಾರಿನಲ್ಲಿ ಬಂದ ಐವರು ಹೊಟೇಲ್​ಗೆ ನುಗ್ಗಿ ಗುರುಸ್ವಾಮಿ ಮೇಲೆ ಮಚ್ಚು, ಲಾಂಗ್‌ಗಳಿಂದ ಮನಬಂದಂತೆ ಹಲ್ಲೆಗೈದು ಪರಾರಿಯಾಗಿದ್ದಾರೆ.

ಮಾರಣಾಂತಿಕ ಹಲ್ಲೆಗೊಳಗಾದ ಗುರುಸ್ವಾಮಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಅವರೂ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾಕಷ್ಟು ದ್ವೇಷ ಕಟ್ಟಿಕೊಂಡಿರುವ ಗುರುಸ್ವಾಮಿ

ತನ್ನ 20 ನೇ ವರ್ಷದಲ್ಲೇ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುಸ್ವಾಮಿ, ಮಧುರೈನಲ್ಲಿ ಸಾಕಷ್ಟು ಧ್ವೇಷ ಕಟ್ಟಿಕೊಂಡಿದ್ದರು. ಜೀವ ಬೆದರಿಕೆ ಇರುವ ಹಿನ್ನೆಲೆ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಆದರೆ ಇಂದು ಹತ್ಯೆಗೆ ಸ್ಕೆಚ್ ಹಾಕಿ ಬಂದ ಗ್ಯಾಂಗ್, ಬೆಂಗಳೂರಿನ ಬಾಣಸವಾಡಿಯ ಹೋಟೆಲ್​ನಲ್ಲಿದ್ದಾಗ ದಾಳಿ ನಡೆಸಿದ್ದಾರೆ.

ಗುರುಸ್ವಾಮಿ ಜೊತೆಯಲ್ಲಿದ್ದವರೇ ಮಾಹಿತಿ ಲೀಕ್ ಮಾಡಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವ ವಿವಿಧ ಪ್ರಕರಣಗಳು ಹೊಂದಿರುವ ಬಗ್ಗೆ ಮಾಹಿತಿ ತಿಳಿದುಬಂದಿದ್ದು, ಪ್ರಸ್ತುತ ಜಾಮೀನಿನ ಮೇಲೆ ಗುರುಸ್ವಾಮಿ ಹೊರಗಿದ್ದಾರೆ.

ಗುರುಸ್ವಾಮಿ ವಿರುದ್ಧ ನಡೆಯುತ್ತಲೇ ಇತ್ತು ಕೊಲೆ ಸಂಚು

ಪ್ರಕರಣ ಸಂಬಂಧ ಮಾತನಾಡಿದ ಪೂರ್ವ ವಿಭಾಗ ಡಿಸಿಪಿ ಭೀಮಾ ಶಂಕರ್ ಗುಳೇದ್, ಗುರುಸ್ವಾಮಿ ವಿರುದ್ಧ ಸಾಕಷ್ಟು ಕ್ರಿಮಿನಲ್ ಬ್ಯಾಗ್ರೌಂಡ್ ಇದೆ. ಎದುರಾಳಿಗಳು ಈತನನ್ನು ಹೊಡೆಯೋಕೆ ಸ್ಕೆಚದ ಹಾಕುತ್ತಲೇ ಇದ್ದರು. ತಲೆಮರಿಸಿಕೊಳ್ಳಲು ಬೆಂಗಳೂರಿಗೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ನಗರದಲ್ಲಿ ಮನೆಯೊಂದನ್ನು ನೋಡುತ್ತಿದ್ದ. ಬ್ರೋಕರ್ ಮೂಲಕ ಮನೆಯೊಂದನ್ನು ನೋಡುತ್ತಿದ್ದ. ಸಂಜೆ ಮನೆಯನ್ನು ನೋಡಿದ ಬಳಿಕ ಬ್ರೋಕರ್ ಜೊತೆ ಚಹಾ ಕುಡಿಯಲು ಬಂದಿದ್ದಾಗ ನಾಲ್ಕೈದು ಜನರು ಬಂದು ಹೊಡೆದಿದ್ದಾರೆ. ತಲೆ ಸೇರಿ ಹಲವು ಕಡೆಗಳಲ್ಲಿ ಗಾಯಗಳಾಗಿವೆ ಎಂದಿದ್ದಾರೆ.

ರಾಜಕೀಯವಾಗಿ ಆತನಿಗೆ ಏನು ಹಿನ್ನಲೆ ಇತ್ತು ಅದು ಇದುವರೆಗೂ ಗೊತ್ತಿಲ್ಲ. ಆದರೆ ಈತನ ಮೇಲೆ ಕೊಲೆ, ಕೊಲೆ ಯತ್ನ ಪ್ರಕರಣಗಳು ಹೆಚ್ಚಿವೆ. ಕಿರೈತುರೈ ಠಾಣೆಯ ರೌಡಿಶೀಟರ್ ಕೂಡ ಹೌದು. ಅದರ ಬಗ್ಗೆ ನಾವು ಮಾಹಿತಿ ಕಲೆಹಾಕುತ್ತಿದ್ದೇವೆ. ಎರಡು ತಂಡಗಳನ್ನು ಮಧುರೈಗೆ ಕಳಿಸುತ್ತಿದ್ದೇವೆ. ಅಲ್ಲಿನ ಪೊಲೀಸರ ಜೊತೆ ಸಂಪರ್ಕದಲ್ಲಿ ಇದ್ದೇವೆ. ಮುರುಗನ್, ಕಾಳಿ ಮುತ್ತು, ಅಟ್ಯಾಕ್ ಪಾಂಡೀ, ರಾಜಾ ಪಾಂಡ್ಯನ್ ಇವರೆಲ್ಲ ಈತನ ಎದುರಾಳಿಗಳಾಗಿದ್ದಾರೆ. ಸದ್ಯ ಯಾರು ಹೊಡೆದಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist